ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm