ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm