ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am