ಬ್ರೇಕಿಂಗ್ ನ್ಯೂಸ್
28-09-20 09:02 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 28: ಜಾಲತಾಣ ಫೇಸ್ ಬುಕ್ನಲ್ಲಿ ಕಪಲ್ ಚಾಲೆಂಜ್, ಸ್ಮೈಲ್ ಚಾಲೆಂಜ್ ಹೀಗೆ ವಿವಿಧ ರೀತಿಯ ಚಾಲೆಂಜ್ಗಳು ಸದ್ದು ಮಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮಾತ್ರ ವಿಭಿನ್ನ ರೀತಿಯ ಚಾಲೆಂಜ್ ಆರಂಭಿಸಿದ್ದಾರೆ. ಗುಂಡಿ ಬಿದ್ದ ಹೆದ್ದಾರಿ ಫೋಟೊಗಳನ್ನು ಷೇರ್ ಮಾಡುತ್ತಿದ್ದು ಮಿಥುನ್ ರೈ ಕರೆಗೆ ಯುವ ಕಾರ್ಯಕರ್ತರು ಓಗೊಟ್ಟು ಸ್ಪಂದಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮಂಗಳೂರು ನಗರದಿಂದಾಗಿ ವಾಣಿಜ್ಯ ವಹಿವಾಟಿಗೆ ಖ್ಯಾತಿ ಪಡೆದಿದೆ. ಅತ್ತ ಕೇರಳ, ಇತ್ತ ಬೆಂಗಳೂರು, ಮತ್ತೊಂದು ಕಡೆ ಉಡುಪಿ - ಕಾರವಾರ ರಸ್ತೆಗಳನ್ನು ಸಂಪರ್ಕದ ಹೆದ್ದಾರಿಗಳೆಲ್ಲ ಮಂಗಳೂರನ್ನು ದಾಟಿಕೊಂಡೇ ಹೋಗಬೇಕು. ಆದರೆ, ಮಂಗಳೂರನ್ನು ಸಂಪರ್ಕಿಸುವ ಹೆಚ್ಚಿನ ರಸ್ತೆಗಳು ಸರಿ ಇಲ್ಲ.
ಮಿಥುನ್ ರೈ ತಮ್ಮ ಫೇಸ್ ಬುಕ್ನಲ್ಲಿ ಹಾಳಾಗಿರುವ ರಸ್ತೆಗಳ ಪೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ.
ಬೆಂಗಳೂರು-ಮಂಗಳೂರು ರಸ್ತೆಯ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಗಳ ಚಿತ್ರಗಳನ್ನು ತೆಗೆದು #ROADChallenge ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ರಸ್ತೆಗಳು ತುಂಬಾ ಹದಗೆಟ್ಟಿವೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸೋದು ಹೇಗೆ? ಈ ರಸ್ತೆಗಳನ್ನು ರಿಪೇರಿ ಮಾಡಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಮಿಥುನ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm