ಬ್ರೇಕಿಂಗ್ ನ್ಯೂಸ್
09-06-22 06:28 pm Mangalore Correspondent ಕರಾವಳಿ
ಪುತ್ತೂರು, ಜೂನ್ 9 : ಹಿಜಾಬ್ ಹೋರಾಟದಿಂದ ಸುದ್ದಿಯಾಗಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆ ಗೋಚರಿಸಿದ್ದು, ಇತ್ತೀಚೆಗೆ ಅಮಾನತುಗೊಂಡವರು ಸೇರಿದಂತೆ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ.
ಸೋಮವಾರದಿಂದ 24 ವಿದ್ಯಾರ್ಥಿನಿಯರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರೂ ವಾರದ ಹಿಂದೆ ಅಮಾನತುಗೊಂಡ ವಿದ್ಯಾರ್ಥಿನಿಯರು ಸೇರಿ ಹಲವರು ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಕಾಲೇಜಿನಿಂದ ಮಾಹಿತಿ ನೀಡಲಾಯಿತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯೇ ಇಲ್ಲವೆಂದು ತಿಳಿಸಿದ್ದು ವಿಶೇಷವಾಗಿತ್ತು.

ಅಮಾನತಾಗಿದ್ದ ಆರು ಮಂದಿ ತರಗತಿಗೆ ಹಾಜರು
ವಾರದ ಮೊದಲು ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಿ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟು ತರಗತಿಗೆ ಬಂದಿದ್ದಾರೆ. ಇದೇ ವೇಳೆ, ಪ್ರತಿಭಟನೆಗು ಹಾಜರಾಗದೆ, ಕಾಲೇಜಿಗೂ ಬರದೆ ದೂರ ಉಳಿದಿದ್ದ 11 ಮಂದಿ ವಿದ್ಯಾರ್ಥಿನಿಯರು ಕೂಡ ತರಗತಿಗೆ ಹಾಜರಾಗಿದ್ದಾರೆ. ಇದರಿಂದಾಗಿ ಒಟ್ಟು 101 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹೊಂದಿರುವ ಕಾಲೇಜಿನಲ್ಲಿ ಬುಧವಾರ 46 ಮಂದಿ ಸಮವಸ್ತ್ರ ನಿಯಮ ಪಾಲನೆಯೊಂದಿಗೆ ತರಗತಿ ಪ್ರವೇಶಿಸಿದ್ದಾರೆ.

ಎರಡು ದಿನಗಳ ಹಿಂದೆ ಹಿಜಾಬ್ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಮಾರ್ಮಿಕ ಮಾತುಗಳನ್ನು ಹೇಳಿದ್ದರು. ಇದರ ಕಾರಣವೋ ಏನೋ ದಿಢೀರ್ ಆಗಿ ಹಿಜಾಬ್ ಹೋರಾಟ ನಡೆಸುತ್ತಿರುವ ಮಂದಿ ಮನಸ್ಸು ಬದಲಾಯಿಸಿದ್ದಾರೆ. ಪ್ರತಿಭಟನೆಯ ಕಾರಣ ತರಗತಿಗೆ ಗೈರು ಹಾಜರಾಗಿದ್ದ ಉಳಿದ ವಿದ್ಯಾರ್ಥಿನಿಯರು ಕೂಡ ಕಾಲೇಜಿಗೆ ಆಗಮಿಸುವ ಭರವಸೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ಪಟ್ಟುಹಿಡಿದ ಮತ್ತೆ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲೇಜಿಗೆ ನಿರ್ಬಂಧ
ಹಿಜಾಬ್ ಹೋರಾಟ ಮಾಡೋರು ಸೌದಿ, ಪಾಕಿಸ್ತಾನಕ್ಕೆ ಹೋಗಿ ಬರಬೇಕು, ಅಲ್ಲಿ ಹೇಗಿದೆ ಅಂತ ತಿಳ್ಕೊಂಡು ಬರಲಿ!
Uppinangady Hijab row, Khaders statement goes viral, 46 students attend class without Hijab.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm