ಬ್ರೇಕಿಂಗ್ ನ್ಯೂಸ್
10-06-22 09:51 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ಶಿಹಾಬ್ ಚೊಟ್ಟೂರು ಎಂಬ ಯುವಕ ಕಾಲ್ನಡಿಗೆಯಲ್ಲೇ ಹಜ್ ಯಾತ್ರೆ ಕೈಗೊಂಡಿದ್ದಾರೆ. ಮಲ್ಲಪುರಂ ನಗರದಿಂದ ಕಾಲ್ನಡಿಗೆಯಲ್ಲೇ ಹೊರಟಿದ್ದು, ತಲಪಾಡಿ ಮೂಲಕ ಕೇರಳದ ಗಡಿಭಾಗ ದಾಟಿ ಮಂಗಳೂರಿಗೆ ಆಗಮಿಸಿದ್ದರು. ಕೇರಳ ಗಡಿಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಶಿಹಾಬ್ ಕಾಲ್ನಡಿಗೆ ಯಾತ್ರೆಗೆ ಶುಭ ಕೋರಿದ್ದಾರೆ.
ಶಿಹಾಬ್ 8640 ಕಿಮೀ ದೂರದ ಮೆಕ್ಕಾಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದು, 9 ತಿಂಗಳ ಪರ್ಯಂತ ನಡೆದು ತಲುಪುವ ಗುರಿ ಇಟ್ಟುಕೊಂಡಿದ್ದಾರೆ. ತಲಪಾಡಿ ಗಡಿಭಾಗ ತಲುಪುವುದಕ್ಕೂ ಮೊದಲು ಹೊಸಂಗಡಿಯಲ್ಲಿ ಶಿಹಾಬ್ ಆರೋಗ್ಯ ತಪಾಸಣೆಯನ್ನೂ ನಡೆಸಲಾಗಿತ್ತು. ಹೊಸಂಗಡಿಯಿಂದ ತಲಪಾಡಿ ಗಡಿಯ ವರೆಗೆ ಅಭಿಮಾನಿಗಳು ನೆರೆದು ಜೊತೆಯಲ್ಲೇ ಕಾಲ್ನಡಿಗೆ ಬಂದಿದ್ದಾರೆ.




ತಲಪಾಡಿ ಬಳಿಕ ಕೋಟೆಕಾರಿನ ಮಸೀದಿಯಲ್ಲಿ ನಮಾಜ್ ಮಾಡಿ, ಅಲ್ಲಿಂದ ಸ್ಥಳೀಯರು ಬೀಳ್ಕೊಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಕೆ.ಅಶ್ರಫ್, ಅಬುಬಕ್ಕರ್ ಸಿದ್ದಿಕ್ ಮತ್ತಿತರರು ಸೇರಿ ತಲಪಾಡಿಯಲ್ಲಿ ಶಿಹಾಬ್ ಅವರನ್ನು ಸ್ವಾಗತಿಸಿದರು. ಸಾವಿರಾರು ಮಂದಿ ಕರ್ನಾಟಕದಿಂದ ಹಜ್ ಯಾತ್ರೆ ತೆರಳಲು ವಿಮಾನ ಟಿಕೆಟ್ ಇನ್ನಿತರ ವ್ಯವಸ್ಥೆ ಮಾಡುತ್ತಿರುವ ಸಂದರ್ಭದಲ್ಲೇ ಶಿಹಾಬ್ ಕಾಲ್ನಡಿಗೆಯಲ್ಲಿ ಹಜ್ ಯಾತ್ರೆ ಕೈಗೊಂಡಿದ್ದು ವಿಶೇಷ. ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ವರೆಗೂ ಕರಾವಳಿಯಲ್ಲೇ ಸಾಗಿ, ಆನಂತರ ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲಕ ಸೌದಿ ಅರೇಬಿಯಾದ ಮೆಕ್ಕಾ ತೆರಳುವ ಯೋಜನೆ ಇದೆ ಎನ್ನಲಾಗುತ್ತಿದೆ.
Shihab Chottur from Malapurum who has undertaken Haj pilgrimage by walk was welcomed by the people of the community in a grand manner at Talapady on Thursday June 9. Shihab had planned to travel 8,640 kilometres by foot, to reach Mecca in nine months. Several people who gathered in Talapady, welcomed him. On Thursday afternoon, Shihab had a health check-up in Hosangadi. He took rest and then continued his journey.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm