ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm