ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am