ಬ್ರೇಕಿಂಗ್ ನ್ಯೂಸ್
13-06-22 09:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಪ್ರವಾದಿ ಪೈಗಂಬರ್ ಅವಹೇಳನ ವಿರೋಧಿಸಿ ಪ್ರತಿಭಟನೆ ನಡೆದಿರುವ ಹಿನ್ನೆಲೆಯಲ್ಲಿ ದೇಶದ ಕರಾವಳಿ ಭಾಗದ ಪ್ರಮುಖ ನಗರ ಮಂಗಳೂರಿನಲ್ಲಿಯೂ ಬೃಹತ್ತಾದ ಪ್ರತಿಭಟನೆ ರೂಪದಲ್ಲಿ ಶಕ್ತಿಪ್ರದರ್ಶನ ತೋರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹ, ಒತ್ತಾಯಗಳು ಕೇಳಿಬರುತ್ತಿದ್ದು, ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.
ದೇಶದ ಬೇರೆ ಬೇರೆ ಕಡೆ ನಡೆದಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಅದೇ ರೀತಿ ಪ್ರತಿಭಟನೆ ನಡೆಸಲು ಯೋಜಿಸಿದ್ದೀರಾ ಎಂದು ಕಮಿಷನರ್ ಧಾರ್ಮಿಕ ಮುಖಂಡರನ್ನು ಪ್ರಶ್ನೆ ಮಾಡಿದ್ದಾರೆ. ಆದರೆ, ಆ ರೀತಿಯ ಯಾವುದೇ ಮಾಹಿತಿ ನಮಗಿಲ್ಲ. ನಾವು ಯಾವುದೇ ರೀತಿಯ ಪ್ರತಿಭಟನೆ ನಡೆಸುವ ಇರಾದೆ ಹೊಂದಿಲ್ಲ ಎಂದು ಧರ್ಮಗುರುಗಳು ಅಭಿಪ್ರಾಯ ನೀಡಿದ್ದಾರೆ.
ಆದರೆ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ ಎನ್ನುವ ಸಂದೇಶಗಳು ಹರಿದಾಡುತ್ತಿರುವ ಬಗ್ಗೆ ಕಮಿಷನರ್ ಅಭಿಪ್ರಾಯ ಕೇಳಿದ್ದಾರೆ. ಆ ರೀತಿಯ ಸಂದೇಶಕ್ಕೂ ನಮಗೂ ಸಂಬಂಧ ಇಲ್ಲ. ನಾವು ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಮುಂದಾಗಿಲ್ಲ ಎಂದು ಮುಖಂಡರು ತಿಳಿಸಿದ್ದಾರೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವ ವಿಚಾರವನ್ನು ಧಾರ್ಮಿಕ ಮುಖಂಡರಿಗೆ ತಿಳಿಸಿದ್ದಾರೆ. ಈಗಾಗಲೇ ನಾವು ಪ್ರತೀ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಗಾ ಇಟ್ಟಿದ್ದೇವೆ. ಯಾರೆಲ್ಲ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಯಾರು ಸಾಮಾಜಿಕ ಸಾಮರಸ್ಯ ಹಾಳುಗೆಡಹುವ ಯತ್ನ ಮಾಡುತ್ತಿದ್ದಾರೆ ಎಂಬುದನ್ನು ನೋಡುತ್ತಿದ್ದೇವೆ. ಶಾಂತಿ ಕದಡುವ ವಾಟ್ಸಪ್ ಗ್ರೂಪ್ ಗಳು ಹಾಗೂ ಇತರ ಜಾಲತಾಣಗಳ ಬಗ್ಗೆಯೂ ನಿಗಾ ಇಟ್ಟಿರುವುದನ್ನು ಧಾರ್ಮಿಕ ಮುಖಂಡರ ಗಮನಕ್ಕೆ ತಂದಿದ್ದಾರೆ.
ಅದಕ್ಕೆ ಪ್ರತಿಕ್ರಿಯಿಸಿದ ಮುಖಂಡರು, ಆ ರೀತಿಯ ಯಾವುದೇ ಅಹಿತಕರ ಘಟನೆ ನಡೆಯದಂತೆ ನೀವು ನೋಡಿಕೊಳ್ಳಬೇಕು. ಜಾಲತಾಣದಲ್ಲಿ ಸಾಮರಸ್ಯ ಕದಡುವ ಸಂದೇಶ ಹಾಕುವ ಮಂದಿಯನ್ನು ನೀವೇ ಪತ್ತೆ ಮಾಡಬೇಕು ಎಂದು ಪೊಲೀಸ್ ಕಮಿಷನರ್ ಬಳಿ ಹೇಳಿದ್ದಾರೆ. ಅಲ್ಲದೆ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ, ಪ್ರತೀ ಠಾಣೆ ವ್ಯಾಪ್ತಿಯಲ್ಲಿ ಯೂತ್ ವಿಂಗ್ ಅನ್ನುವ ಹೊಸ ವ್ಯವಸ್ಥೆ ಮಾಡಲಾಗುವುದು. ಠಾಣೆ ವ್ಯಾಪ್ತಿಯಲ್ಲಿ ಸಮಾಜದಲ್ಲಿ ಸಕ್ರಿಯವಾಗಿರುವ ಎಲ್ಲ ಸಮುದಾಯದ ಯುವಕರನ್ನು ಸೇರಿಸಿ ಯೂತ್ ವಿಂಗ್ ಮಾಡಲಾಗುವುದು. ಅಹಿತಕರ ಘಟನೆಗಳ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರ ಈಗಾಗಲೇ ಗಲಭೆ ನಡೆಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ ಮಂದಿಯ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿರುವುದರಿಂದ ಪೊಲೀಸರು ಆರಂಭಿಕವಾಗಿ ಧಾರ್ಮಿಕ ಗುರುಗಳನ್ನು ಕರೆದು ಮಾತುಕತೆ ನಡೆಸಿದ್ದು ವಿಶೇಷ. ಸೋಮವಾರದ ಸಭೆಯಲ್ಲಿ ರಾಜಕೀಯ ಪಕ್ಷಗಳು, ಇತರ ಸಂಘಟನೆಗಳ ಪ್ರಮುಖರನ್ನು ಕರೆಸಿಲ್ಲ. ಸದ್ಯದಲ್ಲೇ ರಾಜಕೀಯ ಪ್ರಮುಖರು ಮತ್ತು ಹಿಂದು- ಮುಸ್ಲಿಂ ಸಂಘಟನೆಗಳ ಪ್ರಮುಖರನ್ನು ಕರೆಸಿ ಪೊಲೀಸರು ಮಾತುಕತೆ ನಡೆಸಲಿದ್ದಾರೆ.
ಸಭೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ವಿಭಾಗದ ಮಸೀದಿ ಕಮಿಟಿ ಅಧ್ಯಕ್ಷರು, ಮುಸ್ಲಿಂ ಧಾರ್ಮಿಕ ಮುಖಂಡರು, ಕೆ.ಎಂ. ಮಸೂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Prophet row, Mangalore police commissioner Shashi Kumar call for a peace meeting with Muslim leaders after protest erupted all over India by Nupur Sharmas statement on Prophet Mohammad.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm