ಬ್ರೇಕಿಂಗ್ ನ್ಯೂಸ್
14-06-22 01:34 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮಂಗಳೂರು ನಗರದಲ್ಲಿ ಏಂಟಿ ಟೆರರಿಸಂ ಸ್ಕ್ವಾಡ್ ಅನ್ನುವ ಹೊಸ ಘಟಕವನ್ನು ಅಸ್ತಿತ್ವಕ್ಕೆ ತರಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆಯಿಂದ ಆಯ್ದ 35 ಸಿಬಂದಿಯನ್ನು ಬೆಂಗಳೂರಿನಲ್ಲಿ ವಿಶೇಷ ತರಬೇತುಗೊಳಿಸಿ ಭಯೋತ್ಪಾದಕ ವಿರೋಧಿ ದಳವನ್ನು ಹೊಸತಾಗಿ ರಚಿಸಲಾಗಿದೆ.
ಪ್ರತೀ ಜಿಲ್ಲೆಯಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯುಆರ್ ಟಿ) ಅನ್ನುವ ವಿಭಾಗ ಇದೆ. ಸಿಎಆರ್ ಯೂನಿಟ್ ನಲ್ಲಿರುವ ಈ ಸಿಬಂದಿಯನ್ನು ಬೆಂಗಳೂರಿನಲ್ಲಿ ವಿಶೇಷ ತರಬೇತಿಗೆ ಕಳಿಸಲಾಗುತ್ತದೆ. ಕ್ವಿಕ್ ರೆಸ್ಪಾನ್ಸ್ ಟೀಮ್ ಸೇರಬೇಕಿದ್ದಲ್ಲಿ ಬೆಂಗಳೂರಿನ ಕೂಡ್ಲು ಎಂಬಲ್ಲಿ ಸೆಂಟರ್ ಫಾರ್ ಕೌಂಟರ್ ಟೆರರಿಸಂ (ಸಿಸಿಟಿ) ಅನ್ನುವ ಘಟಕದಲ್ಲಿ ತರಬೇತು ಪಡೆಯಬೇಕು. ಪ್ರತಿ ವರ್ಷ ಈ ರೀತಿಯ ತರಬೇತಿಗೆ 30 ಸಿಬಂದಿಯನ್ನು ಕಳಿಸಲಾಗುತ್ತದೆ. ಈ ಬಾರಿ ಮಂಗಳೂರಿನ ಸಿಎಆರ್ ವಿಭಾಗದಿಂದ 35 ಮಂದಿ ತರಬೇತಿ ಪಡೆದು ಬಂದಿದ್ದಾರೆ ಎಂದು ನಗರ ಕಾನೂನು ಸುವ್ಯವಸ್ಥೆ ವಿಭಾಗದ ಉಪಾಯುಕ್ತ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ನಗರ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆಯಾದಲ್ಲಿ ಹೇಗೆ ಎದುರಿಸಬೇಕು, ಜನರ ಮಧ್ಯೆ ಕಾರ್ಯ ನಿರ್ವಹಿಸುವುದು ಹೇಗೆ ಎನ್ನುವ ಬಗ್ಗೆ ತರಬೇತಿ ನೀಡಲಾಗುತ್ತದೆ. ವಿಶೇಷವಾಗಿ ಸಶಸ್ತ್ರ ಬಳಕೆ ಬಗ್ಗೆ ಅವರಿಗೆ ತರಬೇತಿ ನೀಡಲಾಗುವುದು ಎಂದು ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ತರಬೇತಿ ಮುಗಿಸಿ ಬಂದ 35 ಮಂದಿಯಿಂದ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೌರವ ವಂದನೆ ಸ್ವೀಕರಿಸಿದರು. ಡಿಸಿಪಿಗಳಾದ ಹರಿರಾಮ್ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಮಾಹಿತಿ ಪ್ರಕಾರ, ಈ ಹಿಂದೆ ಇದ್ದ ಕ್ವಿಕ್ ರೆಸ್ಪಾನ್ಸ್ ತಂಡವನ್ನೇ ಸಿಸಿಟಿ ಎಂದು ಹೆಸರಿಸಲಾಗುತ್ತದೆ. ಹೊಸ ತಂಡಕ್ಕೆ ಸುಬ್ರಹ್ಮಣ್ಯ ಎಂ. ಚೀಫ್ ಆಗಿರುತ್ತಾರೆ. ತಲಾ 15 ಮಂದಿಯ ಎರಡು ತಂಡ ಇರುತ್ತದೆ. ಐದು ಜನ ಹೆಚ್ಚುವರಿ ಸಿಬಂದಿ ಇರುತ್ತಾರೆ. ಸಾಮಾನ್ಯವಾಗಿ ವಿಐಪಿಗಳು, ಮುಖ್ಯಮಂತ್ರಿ ಬರುವ ಸಂದರ್ಭದಲ್ಲಿ ಇವರನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತದೆ. ಇವರಿಗೆ ಪ್ರತ್ಯೇಕ ಸಮವಸ್ತ್ರವೂ ಇರುತ್ತದೆ.
City anti-terrorism squad under the internal security department is ready to serve the city as well as the limits of commissionerate. The team has 35 police personnel. The team undertook two months of training at Centre for Counter Terrorism (CCT) at Koodlu of Bengaluru.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am