ಬ್ರೇಕಿಂಗ್ ನ್ಯೂಸ್
14-06-22 01:34 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮಂಗಳೂರು ನಗರದಲ್ಲಿ ಏಂಟಿ ಟೆರರಿಸಂ ಸ್ಕ್ವಾಡ್ ಅನ್ನುವ ಹೊಸ ಘಟಕವನ್ನು ಅಸ್ತಿತ್ವಕ್ಕೆ ತರಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆಯಿಂದ ಆಯ್ದ 35 ಸಿಬಂದಿಯನ್ನು ಬೆಂಗಳೂರಿನಲ್ಲಿ ವಿಶೇಷ ತರಬೇತುಗೊಳಿಸಿ ಭಯೋತ್ಪಾದಕ ವಿರೋಧಿ ದಳವನ್ನು ಹೊಸತಾಗಿ ರಚಿಸಲಾಗಿದೆ.
ಪ್ರತೀ ಜಿಲ್ಲೆಯಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯುಆರ್ ಟಿ) ಅನ್ನುವ ವಿಭಾಗ ಇದೆ. ಸಿಎಆರ್ ಯೂನಿಟ್ ನಲ್ಲಿರುವ ಈ ಸಿಬಂದಿಯನ್ನು ಬೆಂಗಳೂರಿನಲ್ಲಿ ವಿಶೇಷ ತರಬೇತಿಗೆ ಕಳಿಸಲಾಗುತ್ತದೆ. ಕ್ವಿಕ್ ರೆಸ್ಪಾನ್ಸ್ ಟೀಮ್ ಸೇರಬೇಕಿದ್ದಲ್ಲಿ ಬೆಂಗಳೂರಿನ ಕೂಡ್ಲು ಎಂಬಲ್ಲಿ ಸೆಂಟರ್ ಫಾರ್ ಕೌಂಟರ್ ಟೆರರಿಸಂ (ಸಿಸಿಟಿ) ಅನ್ನುವ ಘಟಕದಲ್ಲಿ ತರಬೇತು ಪಡೆಯಬೇಕು. ಪ್ರತಿ ವರ್ಷ ಈ ರೀತಿಯ ತರಬೇತಿಗೆ 30 ಸಿಬಂದಿಯನ್ನು ಕಳಿಸಲಾಗುತ್ತದೆ. ಈ ಬಾರಿ ಮಂಗಳೂರಿನ ಸಿಎಆರ್ ವಿಭಾಗದಿಂದ 35 ಮಂದಿ ತರಬೇತಿ ಪಡೆದು ಬಂದಿದ್ದಾರೆ ಎಂದು ನಗರ ಕಾನೂನು ಸುವ್ಯವಸ್ಥೆ ವಿಭಾಗದ ಉಪಾಯುಕ್ತ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ನಗರ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆಯಾದಲ್ಲಿ ಹೇಗೆ ಎದುರಿಸಬೇಕು, ಜನರ ಮಧ್ಯೆ ಕಾರ್ಯ ನಿರ್ವಹಿಸುವುದು ಹೇಗೆ ಎನ್ನುವ ಬಗ್ಗೆ ತರಬೇತಿ ನೀಡಲಾಗುತ್ತದೆ. ವಿಶೇಷವಾಗಿ ಸಶಸ್ತ್ರ ಬಳಕೆ ಬಗ್ಗೆ ಅವರಿಗೆ ತರಬೇತಿ ನೀಡಲಾಗುವುದು ಎಂದು ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ತರಬೇತಿ ಮುಗಿಸಿ ಬಂದ 35 ಮಂದಿಯಿಂದ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೌರವ ವಂದನೆ ಸ್ವೀಕರಿಸಿದರು. ಡಿಸಿಪಿಗಳಾದ ಹರಿರಾಮ್ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಮಾಹಿತಿ ಪ್ರಕಾರ, ಈ ಹಿಂದೆ ಇದ್ದ ಕ್ವಿಕ್ ರೆಸ್ಪಾನ್ಸ್ ತಂಡವನ್ನೇ ಸಿಸಿಟಿ ಎಂದು ಹೆಸರಿಸಲಾಗುತ್ತದೆ. ಹೊಸ ತಂಡಕ್ಕೆ ಸುಬ್ರಹ್ಮಣ್ಯ ಎಂ. ಚೀಫ್ ಆಗಿರುತ್ತಾರೆ. ತಲಾ 15 ಮಂದಿಯ ಎರಡು ತಂಡ ಇರುತ್ತದೆ. ಐದು ಜನ ಹೆಚ್ಚುವರಿ ಸಿಬಂದಿ ಇರುತ್ತಾರೆ. ಸಾಮಾನ್ಯವಾಗಿ ವಿಐಪಿಗಳು, ಮುಖ್ಯಮಂತ್ರಿ ಬರುವ ಸಂದರ್ಭದಲ್ಲಿ ಇವರನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತದೆ. ಇವರಿಗೆ ಪ್ರತ್ಯೇಕ ಸಮವಸ್ತ್ರವೂ ಇರುತ್ತದೆ.
City anti-terrorism squad under the internal security department is ready to serve the city as well as the limits of commissionerate. The team has 35 police personnel. The team undertook two months of training at Centre for Counter Terrorism (CCT) at Koodlu of Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm