ಬ್ರೇಕಿಂಗ್ ನ್ಯೂಸ್
16-06-22 08:03 pm Mangalore Correspondent ಕರಾವಳಿ
ಉಳ್ಳಾಲ, ಜೂ.16 : ಮುನ್ನೂರು ಗ್ರಾಮದ ಭಂಡಾರಬೈಲು ಎಂಬಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯದ ರಾಶಿ ಸುರಿಯುತ್ತಿದ್ದು, ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾಪಂ ಅಧ್ಯಕ್ಷರನ್ನ ಗ್ರಾಮಸ್ಥರು ತರಾಟೆಗೆ ತೆಗೆದ ಘಟನೆ ನಡೆದಿದೆ.
ಭಂಡಾರ ಬೈಲು ಕಾರಣೀಕದ ಪಂಜಂದಾಯ ದೈವಸ್ಥಾನದ ಬಳಿಯ ರಸ್ತೆ ಅಂಚಲ್ಲೇ ಭಾರೀ ಪ್ರಮಾಣದಲ್ಲಿ ಗಬ್ಬು ತ್ಯಾಜ್ಯವನ್ನ ಸುರಿಯಲಾಗುತ್ತಿದೆ. ಹತ್ತಿರದಲ್ಲೇ ಮುನ್ನೂರು ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ಘಟಕವಿದ್ದರೂ ಅದು ನಾದುರಸ್ತಿಯಲ್ಲಿದ್ದು ನಿಷ್ಕ್ರಿಯವಾಗಿದೆ.


ಗುರುವಾರ ನೆರೆಯ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು ಪಿಕ್ ಅಪ್ ವಾಹನದಲ್ಲಿ ತಂದು ಸುರಿದ ವೇಳೆ ಗ್ರಾಮಸ್ಥರು ವಾಹನ ಚಾಲಕನಿಗೆ ಘೆರಾವ್ ಹಾಕಿದ್ದಾರೆ. ಆದರೆ ಚಾಲಕನು ಮುನ್ನೂರು ಪಂಚಾಯತ್ ಅನುಮತಿ ಮೇರೆಗೆ ಕಸ ತಂದು ಸುರಿದಿರುವುದಾಗಿ ಹೇಳಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಕೆರಳಿದ ಗ್ರಾಮಸ್ಥರು ಗ್ರಾ.ಪಂ ಕಚೇರಿಗೆ ತೆರಳಿ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ ಅವರನ್ನೇ ತರಾಟೆಗೆ ತೆಗೆದಿದ್ದಾರೆ. ಗ್ರಾಮಸ್ಥರನ್ನ ಉದ್ದೇಶಿಸಿ ಮಾತನಾಡಿದ ವಿಲ್ಫ್ರೆಡ್ ಅವರು ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯುವ ವಿಚಾರ ತನ್ನ ಗಮನಕ್ಕೆ ಬಂದಿಲ್ಲ. ರಸ್ತೆ ಬದಿ ರಾಶಿ ಬಿದ್ದಿರುವ ತ್ಯಾಜ್ಯವನ್ನ ಶೀಘ್ರ ವಿಲೇವಾರಿ ಮಾಡುತ್ತೇವೆ. ಸಿಸಿಟಿವಿ ದಾಖಲೆ ಪರಿಶೀಲಿಸಿ ಯಾರು ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿದ್ದಾರೋ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಮಜಾಯಿಷಿ ನೀಡಿದರು.


ಗ್ರಾಮದಲ್ಲಿ 15,000 ದಷ್ಟು ಜನಸಂಖ್ಯೆ ಇದೆ. ಕೆಲ ಗ್ರಾಮಸ್ಥರು ತಮ್ಮ ಮನೆಯಲ್ಲೇ ತ್ಯಾಜ್ಯ ವಿಲೇವಾರಿ ಮಾಡಲು ವ್ಯವಸ್ಥೆ ಇದ್ದರೂ ಕಸದ ವಾಹನವನ್ನೇ ಅವಲಂಬಿತವಾಗಿದ್ದಾರೆ. ಮಂಗಳೂರಿನ ವಿಲೇವಾರಿ ಘಟಕಕ್ಕೆ ತ್ಯಾಜ್ಯ ರವಾನಿಸಲು ತಾಂತ್ರಿಕವಾಗಿ ಅಡಚಣೆ ಉಂಟಾಗಿದೆ. ಶಾಸಕ ಯು.ಟಿ ಖಾದರ್ ಅವರ ಮಧ್ಯಸ್ಥಿಕೆಯಲ್ಲಿ ಎಲ್ಲವೂ ಸರಿಹೋಗಲಿದ್ದು ಮತ್ತೆ ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಮಾಡಲಿದ್ದೇವೆ. ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿಗೆಂದೇ ಈಗಾಗಲೇ ಭಂಡಾರಬೈಲು ಪರಿಸರದಲ್ಲಿ ಒಂದು ಎಕರೆ ಜಮೀನು ಮಂಜೂರಾಗಿದ್ದು ವಿಲೇವಾರಿ ಘಟಕ ಶೀಘ್ರವೇ ಆರಂಭಗೊಳ್ಳಲಿದ್ದು ನಂತರ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಲ್ಫ್ರೆಡ್ ಡಿಸೋಜ ಹೇಳಿದ್ದಾರೆ.
Mangalore Residents slams Munnuru gram panchayat officials for tons of garbage on main road.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm