ಬ್ರೇಕಿಂಗ್ ನ್ಯೂಸ್
17-06-22 11:18 am Udupi Correspondent ಕರಾವಳಿ
ಉಡುಪಿ, ಜೂನ್ 17: ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಎಂಬಾತನ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಉಡುಪಿಯ ಕೊರಂಗ್ರಪಾಡಿಯಲ್ಲಿರುವ ವೈಭವೋಪೇತ ಮನೆಗೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಇಂಜಿನಿಯರ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಅಡಗಿಸಿಟ್ಟಿದ್ದ ಎರಡು ಕೇಜಿಗೂ ಹೆಚ್ಚು ಚಿನ್ನವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.



ಮನೆಯಲ್ಲಿ ಇರಿಸಿಕೊಂಡಿದ್ದ ಸುಮಾರು 5 ಲಕ್ಷ ರೂಪಾಯಿ ನಗದನ್ನು ಪತ್ತೆ ಮಾಡಲಾಗಿದೆ. ಅಲ್ಲದೆ, ಚಿನ್ನದ ತಟ್ಟೆ, ಚಿನ್ನದ ತಗಡು, ಅಪಾರ ಪ್ರಮಾಣದ ಆಭರಣಗಳು ಪತ್ತೆಯಾಗಿವೆ. 15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಚಿನ್ನದ ಸರಗಳು, ನೆಕ್ಲೆಸ್, ಬ್ರಾಸ್ಲೇಟ್ ಪತ್ತೆಯಾಗಿವೆ. ಇದಲ್ಲದೆ, ಚಿನ್ನದ ಬೇರೆ ಬೇರೆ ರೀತಿಯ ಒಡವೆಗಳು, ಉಂಗುರ, ದೇವರ ಮೂರ್ತಿಯನ್ನೂ ಪತ್ತೆ ಮಾಡಲಾಗಿದೆ. ಹಲವಾರು ಕಡೆ ಮಾಡಿಟ್ಟಿರುವ ಆಸ್ತಿ, ದಾಖಲೆ ಪತ್ರಗಳನ್ನೂ ವಶಕ್ಕೆ ಪಡೆದಿದ್ದಾರೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡ ಈ ದಾಳಿಯನ್ನು ಮಾಡಿದ್ದು, ಬೆಳ್ಳಂಬೆಳಗ್ಗೆ ಭ್ರಷ್ಟ ಇಂಜಿನಿಯರ್ ಗೆ ಶಾಕ್ ಕೊಟ್ಟಿದೆ.
ACB sleuths who raided the house of assistant engineer of irrigation department Harish at Korangrapadi on Friday June 17, have unearthed huge valuables and cash.The ABC officials found more than two kg of gold, Rs five lac cash, high-end watches, three vehicles, golden plate, golden eating utensil, more than 15 golden bangles, more than 30 golden chains, necklace, bracelet, other golden ornaments, finger rings and a gold idol.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm