ಬ್ರೇಕಿಂಗ್ ನ್ಯೂಸ್
22-06-22 06:52 pm Mangalore Correspondent ಕರಾವಳಿ
ಉಳ್ಳಾಲ, ಜೂ.22 : 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸತತವಾಗಿ ಗೈರು ಹಾಜರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಸಾಮಾಜಿಕ ಕಾರ್ಯಕರ್ತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಕಬೀರ್ ಉಳ್ಳಾಲ್ 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿದಂತೆ ಜಯಂತ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡ ಕಾರಣಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
15 ವರ್ಷಗಳ ಹಿಂದೆ ರೌಡಿ ನಿಗ್ರಹದಳದ ಮುಖ್ಯಸ್ಥರಾಗಿದ್ದ ಇನ್ಸ್ ಪೆಕ್ಟರ್ ಜಯಂತ್ ಶೆಟ್ಟಿ ಮತ್ತವರ ಸಿಬ್ಬಂದಿಗಳು ಉಳ್ಳಾಲ ಪರಿಸರದಲ್ಲಿ ದಾಳಿ ನಡೆಸಿ ಅಮಾಯಕರನ್ನು ಬಂಧಿಸಿದ್ದರು. ಪೊಲೀಸರ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟ ನಡೆಸಿದ್ದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗಿತ್ತು. 2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ನನ್ನನ್ನು ಪೊಲೀಸರು ಬಂಧಿಸಿ, ಬಳ್ಳಾರಿ ಜೈಲಿಗೆ ತಳ್ಳಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡು ಜಯಂತ್ ಶೆಟ್ಟಿ ಮತ್ತು ಉಳ್ಳಾಲ ಪಿಎಸ್ಐ ಶಿವಪ್ರಕಾಶ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾಗಿ ಕಬೀರ್ ಉಳ್ಳಾಲ್ ತಿಳಿಸಿದ್ದಾರೆ.
ಕೋರ್ಟಿನಲ್ಲಿ ಸತತ ಹೋರಾಟ ನಡೆಸಿದ ಫಲವಾಗಿ ಶಿವಪ್ರಕಾಶ್ ಜಾಮೀನು ಪಡೆದರೆ, ಜಯಂತ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಪದೇ ಪದೇ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರೂ, ಬರದೇ ಇರುವುದರಿಂದ ಜೂ.20ರಂದು ಮಂಗಳೂರಿನ ನ್ಯಾಯಾಲಯ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ದೂರುದಾರ ಪರವಾಗಿ ಹಿರಿಯ ನ್ಯಾಯವಾದಿ ಎಸ್.ಎಸ್. ಖಾಝಿ ವಾದಿಸಿದ್ದರು.
Mangalore Court issues non bailable warrant against former cop Jayanth Shetty in Kabeer Ullal case. in a 14-year-old case for repeatedly skipping appearing in court despite summons. The case pertains to a private complaint filed by activist Kabeer Ullal in 2008 when the officer was serving as the head of anti-rowdy squad. Kabeer alleged Jayanth Shetty and other police personnel used to target innocent people from Ullal.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm