ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.

ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm