ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm