ಬ್ರೇಕಿಂಗ್ ನ್ಯೂಸ್
27-06-22 01:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಆಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ. ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲು ಈಗೀಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿದ್ದರು ಅನ್ನೋದನ್ನು ತೋರಿಸುತ್ತಿದ್ದಾರೆ. ಇವರು ದೇಶಪ್ರೇಮಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಜವಹರಲಾಲ್ ನೆಹರೂ 11 ವರ್ಷ ಜೈಲು ವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕೆ ಆಗಿನ ನಾಯಕರಾದ ಶ್ರೀನಿವಾಸ ಮಲ್ಯ, ಕಿಲ್ಲೆಯಂತವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ ಮಲ್ಯ, ಕಿಲ್ಲೆಯವರಿಗೆ ಅವಮಾನಿಸುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.
Nalin Kumar Kateel is a Comedian slams congress leader Ramanath Rai in Mangaluru replying to the statement made by Kateel satating that we never invited Congress leaders children to join Agneepath.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm