ಬ್ರೇಕಿಂಗ್ ನ್ಯೂಸ್
27-06-22 01:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಆಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ. ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲು ಈಗೀಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿದ್ದರು ಅನ್ನೋದನ್ನು ತೋರಿಸುತ್ತಿದ್ದಾರೆ. ಇವರು ದೇಶಪ್ರೇಮಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಜವಹರಲಾಲ್ ನೆಹರೂ 11 ವರ್ಷ ಜೈಲು ವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕೆ ಆಗಿನ ನಾಯಕರಾದ ಶ್ರೀನಿವಾಸ ಮಲ್ಯ, ಕಿಲ್ಲೆಯಂತವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ ಮಲ್ಯ, ಕಿಲ್ಲೆಯವರಿಗೆ ಅವಮಾನಿಸುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.
Nalin Kumar Kateel is a Comedian slams congress leader Ramanath Rai in Mangaluru replying to the statement made by Kateel satating that we never invited Congress leaders children to join Agneepath.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm