ಬ್ರೇಕಿಂಗ್ ನ್ಯೂಸ್
27-06-22 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಕರಾವಳಿಯಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್ ಬಳಕೆ ಪತ್ತೆಯಾಗುತ್ತಿರುವ ಬಗ್ಗೆ ಕೇಂದ್ರ ಸರಕಾರ ಗಂಭೀರ ವಹಿಸಿದೆ. ಆದರೆ, ಕೆಲವೊಮ್ಮೆ ಅರಬ್ಬೀ ಸಮುದ್ರದಲ್ಲಿ ತೆರಳುವ ಹಡಗಿನಲ್ಲಿ ಸಿಬಂದಿ ಬಳಸುವ ಸ್ಯಾಟಲೈಟ್ ಫೋನ್ ಸಿಗ್ನಲ್ ಕೂಡ ತಪ್ಪಾಗಿ ತೋರಿಸುವ ಸಾಧ್ಯತೆ ಇರುತ್ತದೆ. ಅಕ್ಷಾಂಶ, ರೇಖಾಂಶದಲ್ಲಿ ಲೆಕ್ಕ ಹಾಕಿದ್ದು ತಪ್ಪಾಗಿ ಬಂದಲ್ಲಿ ಭೂ ಪ್ರದೇಶವನ್ನು ತೋರಿಸುತ್ತದೆ. ಹಾಗಿದ್ದರೂ, ಕರಾವಳಿಯಲ್ಲಿ ಉಗ್ರರ ಚಟುವಟಿಕೆ ಹಿಂದೆ ಇದ್ದುದರಿಂದ ಭದ್ರತಾ ವಿಭಾಗಗಳು ಈ ಬಗ್ಗೆ ಜಾಗ್ರತೆ ವಹಿಸಿ ತನಿಖೆ ನಡೆಸುತ್ತವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವರು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಅನ್ವರ್ ಮಾಣಿಪ್ಪಾಡಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಯಾರನ್ನೂ ಟಾರ್ಗೆಟ್ ಮಾಡುವ ಉದ್ದೇಶ ಸರಕಾರಕ್ಕಿಲ್ಲ. ಸಂವಿಧಾನದ ಪ್ರಕಾರ ಎಲ್ಲರನ್ನೂ ಸಮಾನವಾಗಿ ನಡೆದುಕೊಳ್ಳುತ್ತೇವೆ. ಏನಾದ್ರೂ ಆರೋಪ ಇದ್ದಲ್ಲಿ ಮಾತ್ರ ತನಿಖೆ, ವಿಚಾರಣೆ ನಡೆಸುತ್ತೇವೆ. ಅದು ಬಿಟ್ಟರೆ ಯಾವುದೇ ಟಾರ್ಗೆಟ್ ಮಾಡಿದ ಉದಾಹರಣೆ ಇಲ್ಲ. ಅನ್ವರ್ ಮಾಣಿಪ್ಪಾಡಿಯವರು ನನ್ನ ಸ್ನೇಹಿತರು. ಯಾವ ವಿಚಾರದಲ್ಲಿ ಭಿನ್ನಮತ ಇದೆ ಎನ್ನುವ ಬಗ್ಗೆ ಅವರನ್ನೇ ಕೇಳಿ ಮಾತನಾಡುತ್ತೇನೆ ಎಂದು ಹೇಳಿದರು.

ವಕ್ಫ್ ಆಸ್ತಿ ಕಬಳಿಕೆ ವರದಿ ಬಗ್ಗೆ ಕೇಳಿದ್ದಕ್ಕೆ, ಅದು ನಮ್ಮ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ಸರಕಾರದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಸೈಬರ್ ಕ್ರೈಮ್ ಅಪರಾಧ ಪತ್ತೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ, ಸೈಬರ್ ಅಪರಾಧಗಳ ಪತ್ತೆಗಾಗಿ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತ್ಯೇಕ ತಂಡ ಮಾಡಿದ್ದೇವೆ. ಅವರು ನಿಗಾ ಇಟ್ಟಿದ್ದಾರೆ. ಎಲ್ಲವನ್ನೂ ಪತ್ತೆ ಮಾಡಲಾಗುವುದು, ಸೈಬರ್ ಅಪರಾಧಗಳ ಪತ್ತೆಗೆ ಸಮಯ ಬೇಕಾಗುತ್ತದೆ ಎಂದು ಹೇಳಿದರು.
State home minister Araga Jnanendra has said that he has ordered for a survey of foreign nationals living in Mangaluru and Dakshina Kannada police station limits. Also satellite phone activate in different parts of Mangaluru has been taken seriously by our police officers he added.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm