ಬ್ರೇಕಿಂಗ್ ನ್ಯೂಸ್
28-06-22 05:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ನಗರದ ಪಂಪ್ವೆಲ್ ಮೇಲ್ಸೇತುವೆಯ ಅಡಿಭಾಗದಲ್ಲಿ ಮಂಗಳವಾರ ಮಧ್ಯಾಹ್ನ ಹಠಾತ್ತಾಗಿ ರಸ್ತೆ ಕುಸಿದು ನೀರು ಚಿಮ್ಮತೊಡಗಿದ್ದು ಸ್ಥಳೀಯರು ಏನಾಗುತ್ತಿದೆ ಎಂದು ತಿಳಿಯದೆ ಗಲಿಬಿಲಿ ಒಳಗಾಗಿದ್ದಾರೆ. ಕೆಲವು ಜನರು ಸ್ಥಳದಲ್ಲಿ ಭೂಕುಸಿತ ಆಗುತ್ತೋ ಅನ್ನುವ ಭಯಕ್ಕೆ ಒಳಗಾಗಿದ್ದಾರೆ. ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ಕೂಡಲೇ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿದ್ದಾರೆ. ಬಳಿಕ ಮಹಾನಗರ ಪಾಲಿಕೆಯ ನೀರು ಸರಬರಾಜು ಇಲಾಖೆಯ ಸಿಬಂದಿಗೆ ವಿಷಯ ತಿಳಿಸಿದ್ದಾರೆ.
ತುಂಬೆ ಅಣೆಕಟ್ಟಿನಿಂದ ಮಂಗಳೂರು ನಗರಕ್ಕೆ ಪೂರೈಕೆಯಾಗುವ ನೀರಿನ ಪೈಪ್ ಲೈನ್ ಪಂಪ್ವೆಲ್ ರಸ್ತೆಯ ಅಡಿ ಭಾಗದಿಂದ ಬೆಂದೂರುವೆಲ್ ಪಂಪ್ ಹೌಸ್ ಗೆ ಸಂಪರ್ಕ ಹೊಂದಿದೆ. ಅದರಲ್ಲಿ ಒಂದು 38 ಇಂಚ್ ವ್ಯಾಸದ ನೀರಿನ ಪೈಪ್ ಲೈನ್ ಆಗಿದ್ದರೆ, ಇನ್ನೊಂದು ಪಡೀಲ್ ಪಂಪ್ ಹೌಸ್ ನಿಂದ ಸಬ್ ಆಗಿ ಲೇಡಿಹಿಲ್ ಪಂಪ್ ಹೌಸ್ಗೆ ಪೂರೈಕೆಯಾಗುತ್ತಿರುವ 18 ಇಂಚು ವ್ಯಾಸದ ನೀರಿನ ಪೈಪ್ ಲೈನ್. ಮಳೆಯಿಂದಾಗಿ ರಸ್ತೆ ಸಡಿಲಗೊಂಡು ಹೆದ್ದಾರಿಯಲ್ಲಿ ಭಾರದ ವಾಹನಗಳು ಸಾಗುತ್ತಿದ್ದಾಗ ಅಡಿಭಾಗದಲ್ಲಿ ಸಾಗಿದ್ದ 18 ಇಂಚು ವ್ಯಾಸದ ಪೈಪ್ ಲೈನ್ ಒಡೆದು ಹೋಗಿದ್ದು, ನೀರಿನ ರಭಸಕ್ಕೆ ರಸ್ತೆಯನ್ನೇ ಮೇಲಕ್ಕೆ ಚಿಮ್ಮುತ್ತಾ ನೀರು ಹೊರಬಂದಿದೆ.




ಕಂಕನಾಡಿ ಕಡೆಯಿಂದ ಬರುವ ವಾಹನಗಳು ಸೇತುವೆಯ ಅಡಿಭಾಗದಿಂದಾಗಿ ಗರೋಡಿಯತ್ತ ಸಾಗಲು ನಡುವಿನ ಸರ್ಕಲ್ ದಾಟುವಲ್ಲಿಯೇ ನಾಲ್ಕೈದು ಮೀಟರ್ ವ್ಯಾಪ್ತಿಯಲ್ಲಿ ನೀರು ಚಿಮ್ಮತೊಡಗಿತ್ತು. ಆನಂತರ, ನೀರಿನ ಪೈಪ್ ಲೈನನ್ನು ಬಂದ್ ಮಾಡಿದ್ದು, ಪೈಪ್ ಒಡೆದಿರುವುದು ಎಲ್ಲಿ ಅನ್ನುವುದನ್ನು ಪತ್ತೆ ಹಚ್ಚಲು ಕಾಮಗಾರಿ ಆರಂಭಿಸಿದ್ದಾರೆ. ಹಿಂದೆ ಈ ಭಾಗದಲ್ಲಿ ನೀರಿನ ತೋಡು ಇತ್ತು. ಅದರ ಬದಿಯಲ್ಲೇ ನೀರಿನ ಪೈಪ್ ಲೈನ್ ಹಾಕಲಾಗಿತ್ತು. ಆನಂತರ ರಸ್ತೆ ವಿಸ್ತರಣೆಯಾದ ಸಂದರ್ಭದಲ್ಲಿ ಅದರ ಮೇಲ್ಗಡೆ ಮಣ್ಣು ಮುಚ್ಚಿ ರಸ್ತೆ ಮಾಡಲಾಗಿತ್ತು. ರಸ್ತೆಯಾಗಿ ಎರಡು ವರ್ಷ ಆಗುತ್ತಲೇ ನೀರಿನ ಪೈಪ್ ಲೈನ್ ಒಡೆದು ಹೋಗಿದೆ.



ಸದ್ಯಕ್ಕೆ ಲೇಡಿಹಿಲ್ ಪಂಪ್ ಹೌಸ್ ಗೆ ಪೂರೈಕೆಯಾಗುವ 18 ಇಂಚು ವ್ಯಾಸದ ನೀರಿನ ಪೈಪ್ ಲೈನನ್ನು ಮಾತ್ರ ಕಡಿತ ಮಾಡಲಾಗಿದೆ. ಇದರಿಂದ ಸುಲ್ತಾನ್ ಬತ್ತೇರಿ, ಉರ್ವಾ, ಮಣ್ಣಗುಡ್ಡ, ಲೇಡಿಹಿಲ್, ಕಾಪಿಕಾಡು, ಚಿಲಿಂಬಿ, ಕೋಡಿಕಲ್ ಆಸುಪಾಸಿನ ವ್ಯಾಪ್ತಿಯ ಏಳು ಕಾರ್ಪೊರೇಟರ್ ಏರಿಯಾಗಳಿಗೆ ನೀರಿನ ಪೂರೈಕೆ ಸ್ಥಗಿತ ಆಗಿದೆ. ಪೈಪ್ ಒಡೆದಿದ್ದು ಎಲ್ಲಿ ಅನ್ನೋದು ಪತ್ತೆಯಾದಲ್ಲಿ ಇಂದು ರಾತ್ರಿಯೇ ಸರಿಪಡಿಸಲಾಗುವುದು, ಇಲ್ಲದೇ ಹೋದಲ್ಲಿ ಒಂದು ದಿನ ವಿಳಂಬ ಆಗಬಹುದು ಎಂದು ಕಾಮಗಾರಿ ಸ್ಥಳದಲ್ಲಿದ್ದ ನೀರಾವರಿ ಇಲಾಖೆಯ ಸಿಬಂದಿ ತಿಳಿಸಿದ್ದಾರೆ.
As the water pipeline connecting from Thumbe to Bendorewell got damaged at Pumpwell, heavy water spillage and traffic snarl was witnessed near the flyover here on Tuesday June 28.The incident created inconvenience to the vehicular movement. Due to the incident, water is flowing on the road which led to cracks on the tar road under the flyover.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm