ಬ್ರೇಕಿಂಗ್ ನ್ಯೂಸ್
28-06-22 10:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ಉಳ್ಳಾಲ ಸಮುದ್ರದಲ್ಲಿ ಮುಳುಗಿರುವ ಸಿರಿಯಾ ಮೂಲದ ಸರಕು ಹಡಗಿನಿಂದ ತೈಲ ಸೋರಿಕೆಯಾಗಿರುವುದನ್ನು ಜಿಲ್ಲಾಡಳಿತ ಖಚಿತ ಪಡಿಸಿದೆ. ತೈಲ ಸೋರಿಕೆಯಾಗಿದ್ದು, ತೀರ ಪ್ರದೇಶದ ಮೀನುಗಾರರು ಜಾಗ್ರತೆ ವಹಿಸಬೇಕು. ಅಲ್ಲದೆ, ಉಳ್ಳಾಲ ಭಾಗದಲ್ಲಿ ಮೀನುಗಾರಿಕೆ ನಡೆಸಕೂಡದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ನೀಡಿರುವ ಪ್ರಕಟಣೆಯ ಪ್ರಕಾರ ಹಡಗಿನ ಡರ್ಟಿ ವಾಟರ್ ಟ್ಯಾಂಕಿನಲ್ಲಿ ತೈಲ ಸೋರಿಕೆಯಾಗಿದೆ ಎನ್ನುವ ಮಾಹಿತಿ ಇದೆ. ಆದರೆ ಉಳ್ಳಾಲ ಪ್ರದೇಶದ ಮೀನುಗಾರರ ಪ್ರಕಾರ, ಎರಡು ದಿನಗಳ ಹಿಂದೆಯೇ ತೈಲ ಸೋರಿಕೆ ಆಗಿದ್ಯಂತೆ. ಗಾಳಿ ದಕ್ಷಿಣ ಕಡೆಗೆ ಇರುವುದರಿಂದ ಅದರ ವಾಸನೆಯು ಕೇರಳದ ಕಡೆಗೆ ಸಾಗುತ್ತಿದೆ. ಹೀಗಾಗಿ ಉಳ್ಳಾಲದಲ್ಲಿ ಅಷ್ಟರ ಮಟ್ಟಿಗೆ ವಾಸನೆ ಹರಡಿಲ್ಲ. ಬಟ್ಟಂಪಾಡಿ ಪ್ರದೇಶದಲ್ಲಿ ಮಾತ್ರ ತೈಲದ ವಾಸನೆ ಇದೆ. ಕಡಲಿನ ಅಬ್ಬರವೂ ಹೆಚ್ಚಿರುವುದರಿಂದ ಅದರ ಘಾಟು ಈಗ ತಿಳಿಯುತ್ತಿಲ್ಲ. ಇನ್ನೆರಡು ದಿನ ಹೋದಲ್ಲಿ ಉಳ್ಳಾಲದಲ್ಲಿ ಘಾಟು ಹೆಚ್ಚಲಿದೆ ಎಂದು ಅಲ್ಲಿನ ಮೀನುಗಾರರು ಹೇಳಿದ್ದಾರೆ.



ಸಿರಿಯಾ ಮೂಲದ ಸರಕು ಹಡಗು ವಾರದ ಹಿಂದೆ 5 ನಾಟಿಕಲ್ ಮೈಲು ದೂರದಲ್ಲಿ ದುರಂತಕ್ಕೀಡಾಗಿತ್ತು. ಆನಂತರ, ಗಾಳಿಗೆ ತೀರ ಸೇರಿದ್ದು, ಈಗ ಉಚ್ಚಿಲ ಬಟ್ಟಂಪಾಡಿ ಪ್ರದೇಶದಿಂದ ಒಂದು ನಾಟಿಕಲ್ ಮೈಲು ದೂರದಲ್ಲಿ ನೆಲದಲ್ಲಿ ಹೂತು ಬಿಟ್ಟಿದೆ. ಆದರೆ ಅದರ ತುದಿಯ ಭಾಗ ಮೇಲಕ್ಕೆ ಕಾಣುತ್ತಿದೆ. ಇದೇ ವೇಳೆ, ತೈಲ ಸೋರಿಕೆ ಆಗದಂತೆ ತಡೆಯಲು ಜಿಲ್ಲಾಡಳಿತದಿಂದ ಉಳ್ಳಾಲ ತೀರದಲ್ಲಿ ಕಸರತ್ತು ನಡೆದಿತ್ತು. ಕೋಸ್ಟ್ ಗಾರ್ಡ್ ಮತ್ತು ಇನ್ನಿತರ ಭದ್ರತಾ ಘಟಕಗಳು ತೀರ ಪ್ರದೇಶದಲ್ಲಿ ತೈಲು ಸೋರಿಕೆಯಾದರೆ ತೀರಕ್ಕೆ ಸಮಸ್ಯೆಯಾಗದಂತೆ ಹೇಗೆ ತಡೆಯಬೇಕು ಅನ್ನುವ ಬಗ್ಗೆ ಅಣಕು ಕಾರ್ಯಾಚರಣೆ ನಡೆಸಿದ್ದವು. ಈಗ ತೈಲ ಸೋರಿಕೆಯಾಗಿದ್ದು, ಸ್ಥಳದಲ್ಲಿ ಯಾವುದೇ ಅಧಿಕಾರಿ ತಂಡ ಕಂಡುಬಂದಿಲ್ಲ ಎಂದಿದ್ದಾರೆ ಸ್ಥಳೀಯರು.
Mangalore oil spill from the cargo ship, fishermen advised not to go for fishing. Indian Coast Guard has continued to monitor the situation around the grounded merchant ship MV Princess Miral of New Mangalore for any probable leakage of oil from the ship. The ship had sunk two days ago. The State administration along with other stakeholders is also coordinating for shore line cleanup in case of any oil spill.Constant surveillance has been undertaken by Coast Guard aircraft and ships in the area around the vessel and onshore for pollution response since June 21.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm