ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.


ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.


ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm