ಬ್ರೇಕಿಂಗ್ ನ್ಯೂಸ್
30-09-20 11:14 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬಿದ್ದು ಸಿಕ್ಕಿದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಯನ್ನು ಶಾಸಕರ ಮುತುವರ್ಜಿಯಿಂದ ವಾರೀಸುದಾರರಿಗೆ ಮರಳಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜಿನ ಬಳಿ ಪ್ರಭಾಕರ ಪ್ರಭು ಎಂಬವರಿಗೆ ಪರ್ಸ್ ಸಿಕ್ಕಿತ್ತು. ಅದರಲ್ಲಿ ಅಂದಾಜು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಇದ್ದುದನ್ನು ಗಮನಿಸಿದ ಪ್ರಭಾಕರ ಪ್ರಭು, ತಮ್ಮ ಸಂಬಂಧಿಯಾಗಿರುವ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದಿದ್ದರು. ವೇದವ್ಯಾಸ ಕಾಮತ್ ಅವರು, ಮಹಾಲಕ್ಷ್ಮಿ ಜ್ಯುವೆಲ್ಲರ್ಸ್ ಮಾಲೀಕರಾಗಿರುವ ರವೀಂದ್ರ ನಿಕ್ಕಂ ಬಳಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ರವೀಂದ್ರ ನಿಕ್ಕಂ ತಮ್ಮ ಆಪ್ತರ ವಲಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದಾಗ, ಅದು ಅಡ್ಯಾರ್ ಬಳಿಯ ನಿವಾಸಿ ಕೃಷ್ಣ ಆಚಾರ್ ಅವರಿಗೆ ಸೇರಿದ್ದು ಎಂದು ಗೊತ್ತಾಯಿತು. ಈ ಕುರಿತು ಕೃಷ್ಣ ಆಚಾರ್ ಅವರ ಬಳಿ ವಿಚಾರಿಸಿದಾಗ ಹಿಂದಿನ ದಿನ ಪರ್ಸ್ ಕಳೆದುಹೋಗಿದ್ದನ್ನು ಅವರು ರವೀಂದ್ರ ನಿಕ್ಕಂ ಅವರಿಗೆ ತಿಳಿಸಿದರು.

ಮಂಗಳೂರಿನ ಜೋಡುಮಠ ರಸ್ತೆಯಲ್ಲಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಬುಧವಾರ ಟ್ರಸ್ಟ್ ಪ್ರಮುಖರಾದ ಹನುಮಂತ ಕಾಮತ್ ಅವರು ಪ್ರಭಾಕರ್ ಪ್ರಭು ಹಾಗೂ ರವೀಂದ್ರ ನಿಕ್ಕಂ ಅವರ ಉಪಸ್ಥಿತಿಯಲ್ಲಿ ಕೃಷ್ಣ ಆಚಾರ್ ಅವರಿಗೆ ಬಂಗಾರವನ್ನು ಹಸ್ತಾಂತರಿಸಿದರು. ಕೃಷ್ಣ ಆಚಾರ್ ಸಾಂಪ್ರದಾಯಿಕ ಚಿನ್ನದ ಕೆಲಸಗಾರರಾಗಿದ್ದು, ಬಂಗಾರದ ಆಭರಣ ಮಾಡಲು ಚಿನ್ನದ ಗಟ್ಟಿಯನ್ನು ಖರೀದಿಸಿ ದಾರಿಯಲ್ಲಿ ಬರುತ್ತಿದ್ದಾಗ ಕಳೆದುಕೊಂಡಿದ್ದರು. ಇದೇ ವೇಳೆ, ಪ್ರಾಮಾಣಿಕವಾಗಿ ಬಂಗಾರವನ್ನು ಸಂಬಂಧಪಟ್ಟವರಿಗೆ ಮರಳಿಸಲು ಪ್ರಯತ್ನ ಪಟ್ಟ ಪ್ರಭಾಕರ್ ಪ್ರಭು ಅವರನ್ನು ಹನುಮಂತ ಕಾಮತ್ ಅಭಿನಂದಿಸಿದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am