ಬ್ರೇಕಿಂಗ್ ನ್ಯೂಸ್
30-09-20 11:14 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬಿದ್ದು ಸಿಕ್ಕಿದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಯನ್ನು ಶಾಸಕರ ಮುತುವರ್ಜಿಯಿಂದ ವಾರೀಸುದಾರರಿಗೆ ಮರಳಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜಿನ ಬಳಿ ಪ್ರಭಾಕರ ಪ್ರಭು ಎಂಬವರಿಗೆ ಪರ್ಸ್ ಸಿಕ್ಕಿತ್ತು. ಅದರಲ್ಲಿ ಅಂದಾಜು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಇದ್ದುದನ್ನು ಗಮನಿಸಿದ ಪ್ರಭಾಕರ ಪ್ರಭು, ತಮ್ಮ ಸಂಬಂಧಿಯಾಗಿರುವ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದಿದ್ದರು. ವೇದವ್ಯಾಸ ಕಾಮತ್ ಅವರು, ಮಹಾಲಕ್ಷ್ಮಿ ಜ್ಯುವೆಲ್ಲರ್ಸ್ ಮಾಲೀಕರಾಗಿರುವ ರವೀಂದ್ರ ನಿಕ್ಕಂ ಬಳಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ರವೀಂದ್ರ ನಿಕ್ಕಂ ತಮ್ಮ ಆಪ್ತರ ವಲಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದಾಗ, ಅದು ಅಡ್ಯಾರ್ ಬಳಿಯ ನಿವಾಸಿ ಕೃಷ್ಣ ಆಚಾರ್ ಅವರಿಗೆ ಸೇರಿದ್ದು ಎಂದು ಗೊತ್ತಾಯಿತು. ಈ ಕುರಿತು ಕೃಷ್ಣ ಆಚಾರ್ ಅವರ ಬಳಿ ವಿಚಾರಿಸಿದಾಗ ಹಿಂದಿನ ದಿನ ಪರ್ಸ್ ಕಳೆದುಹೋಗಿದ್ದನ್ನು ಅವರು ರವೀಂದ್ರ ನಿಕ್ಕಂ ಅವರಿಗೆ ತಿಳಿಸಿದರು.

ಮಂಗಳೂರಿನ ಜೋಡುಮಠ ರಸ್ತೆಯಲ್ಲಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಬುಧವಾರ ಟ್ರಸ್ಟ್ ಪ್ರಮುಖರಾದ ಹನುಮಂತ ಕಾಮತ್ ಅವರು ಪ್ರಭಾಕರ್ ಪ್ರಭು ಹಾಗೂ ರವೀಂದ್ರ ನಿಕ್ಕಂ ಅವರ ಉಪಸ್ಥಿತಿಯಲ್ಲಿ ಕೃಷ್ಣ ಆಚಾರ್ ಅವರಿಗೆ ಬಂಗಾರವನ್ನು ಹಸ್ತಾಂತರಿಸಿದರು. ಕೃಷ್ಣ ಆಚಾರ್ ಸಾಂಪ್ರದಾಯಿಕ ಚಿನ್ನದ ಕೆಲಸಗಾರರಾಗಿದ್ದು, ಬಂಗಾರದ ಆಭರಣ ಮಾಡಲು ಚಿನ್ನದ ಗಟ್ಟಿಯನ್ನು ಖರೀದಿಸಿ ದಾರಿಯಲ್ಲಿ ಬರುತ್ತಿದ್ದಾಗ ಕಳೆದುಕೊಂಡಿದ್ದರು. ಇದೇ ವೇಳೆ, ಪ್ರಾಮಾಣಿಕವಾಗಿ ಬಂಗಾರವನ್ನು ಸಂಬಂಧಪಟ್ಟವರಿಗೆ ಮರಳಿಸಲು ಪ್ರಯತ್ನ ಪಟ್ಟ ಪ್ರಭಾಕರ್ ಪ್ರಭು ಅವರನ್ನು ಹನುಮಂತ ಕಾಮತ್ ಅಭಿನಂದಿಸಿದರು.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm