ಬ್ರೇಕಿಂಗ್ ನ್ಯೂಸ್
04-07-22 08:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಜುಲೈ 1ರಂದು ಭಾರೀ ಮಳೆಯಾಗಿದ್ದ ಕಾರಣ ಆ ಭಾಗದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಎತ್ತರ ಪ್ರದೇಶ ಆಗಿದ್ದರೂ ಮನೆಗಳಿಗೆ ನೀರು ನುಗ್ಗಿದ್ದು, ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನೀರು ನುಗ್ಗಿ ಬರುತ್ತಿದ್ದುದು ಜನರನ್ನು ದಿಗಿಲು ಮಾಡಿತ್ತು. ಅಲ್ಲಿರುವ ಸಣ್ಣ ಸೇತುವೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತುಂಬಿಕೊಂಡು ನೀರು ಹರಿಯದೆ ತಡೆಯಾಗಿದ್ದು ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.
ಈ ಬಗ್ಗೆ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಅಡ್ಯಾರ್ ಗ್ರಾಮ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳು ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಅಡ್ಯಾರ್ ಪಂಚಾಯತ್ ಪಿಡಿಓ ಕೃಷ್ಣ ನಾಯ್ಕ್ ಸ್ವತಃ ನೀರು ಹರಿಯೋ ಚರಂಡಿಗೆ ಇಳಿದು ಪ್ಲಾಸ್ಟಿಕ್ ಹೆಕ್ಕಿದ್ದಾರೆ. ಅಲ್ಲದೆ, ಸೇತುವೆ ಅಡಿಭಾಗದಲ್ಲಿ ಹಿಡಿದುಕೊಂಡಿದ್ದ ಪ್ಲಾಸ್ಟಿಕ್ ತೆಗೆಸಲು ಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ.







ಮೊದಲೇ ಸಣ್ಣ ಸೇತುವೆ. ಒಂದು ಭಾಗದಿಂದ ನೀರು ನುಗ್ಗಿ ಬಂದಿದ್ದರಿಂದ ಸೇತುವೆ ಬ್ಲಾಕ್ ಆಗಿತ್ತು. ಆಮೇಲೆ ನೋಡಿದರೆ, ಅಲ್ಲಿನ ಎಲ್ಲ ರಸ್ತೆಗಳಲ್ಲೂ ನೀರು ನುಗ್ಗಿ ಬಂದಿತ್ತು. ಅಷ್ಟೊಂದು ನೀರು ಎಲ್ಲಿಂದ ಬಂದಿತ್ತು ಅನ್ನೋದು ಜನರಿಗೂ ಸೋಜಿಗವಾಗಿತ್ತು. ಸರಿಯಾದ ಚರಂಡಿ ಮಾಡಿಲ್ಲ. ಇದ್ದ ಚರಂಡಿಯಲ್ಲೂ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ಸುರಿಯಲಾಗಿದೆ ಎಂದು ಸ್ಥಳೀಯರು ಅಡ್ಯಾರ್ ಪಂಚಾಯತ್ ಆಡಳಿತದ ಬಗ್ಗೆ ಪ್ರಶ್ನೆ ಮಾಡಿದ್ದರು. ಇದೀಗ ಸ್ವತಃ ಪಿಡಿಓ ಅಧಿಕಾರಿಯೇ ನೀರು ಹರಿಯೋ ಮೋರಿಗೆ ಇಳಿದು ಸ್ವಚ್ಛ ಮಾಡಿದ್ದು ಜನರ ಪ್ರಶಂಸೆಗೆ ಕಾರಣವಾಗಿದೆ.
Mangalore Adyar gram panchayat PDO Harish Nayak gets into surge water at Valachil to clear garbage. Few days ago valachil had drowned with water creating havoc. After complaints from public PDO who visited the spot got down himself into the surge water to clear the garbage waste. People have applauded his work.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm