ಬ್ರೇಕಿಂಗ್ ನ್ಯೂಸ್
05-07-22 09:35 pm Mangalore Correspondent ಕರಾವಳಿ
ಉಳ್ಳಾಲ, ಜು.5: ನಿರಂತರ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ತೊಕ್ಕೊಟ್ಟು ಬಳಿಯ ಕಲ್ಲಾಪು ಪ್ರದೇಶ ಜಲಾವೃತವಾಗಿದ್ದು ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ.
ಕಲ್ಲಾಪು ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಯು.ಟಿ ಖಾದರ್, ಪ್ರಾಕೃತಿಕ ವಿಕೋಪ ಸಭೆ ನಡೆಸದ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗರಂ ಆಗಿದ್ದಾರೆ. ಕಲ್ಲಾಪಿನ ಸುಮಾರು ಐವತ್ತಕ್ಕೂ ಹೆಚ್ಚಿನ ಮನೆಗಳು, ಸಭಾಂಗಣ, ವಾಣಿಜ್ಯ ಕಟ್ಟಡಗಳು ಜಲಾವೃತಗೊಂಡಿವೆ. ಪ್ರತೀ ವರ್ಷವೂ ಈ ಪ್ರದೇಶಗಳು ಮಳೆಗಾಲದಲ್ಲಿ ನೆರೆಗೆ ಜಲಾವೃತಗೊಳ್ಳುತ್ತದೆ.





ಸ್ಥಳೀಯರಾದ ಮಹಮ್ಮದ್ ತಯ್ಯುಬ್ ಹೇಳುವ ಪ್ರಕಾರ ಈ ಬಾರಿ ಇನ್ನೂ ನೆರೆ ಬಂದಿಲ್ಲ. ಅಸಮರ್ಪಕ ಚರಂಡಿಗಳಲ್ಲಿ ನೀರು ಹರಿಯದ ಪರಿಣಾಮ ಪ್ರದೇಶ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಂಡ ವೇಳೆ ಕಲ್ಲಾಪುವಿನ ರಸ್ತೆ ಬದಿಯಲ್ಲಿದ್ದ ರಾಜ ಕಾಲುವೆ ಮುಚ್ಚಲ್ಪಟ್ಟಿದ್ದು ಇದರಿಂದ ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ಹರಿಯದೆ ಕೃತಕ ನೆರೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಅಲವತ್ತುಕೊಂಡಿದ್ದಾರೆ.
ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೆರ್ಮನ್ನೂರು ಗ್ರಾಮಕರಣಿಕೆ ಶ್ವೇತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಹೆದ್ದಾರಿ ಬದಿಯ ರಾಜಕಾಲುವೆಯನ್ನ ಸರಿಪಡಿಸಲು ಸೂಚಿಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕರಾವಳಿಯಲ್ಲಿ ಬಹಳಷ್ಟು ಸಮಸ್ಯೆಗಳು ಎದುರಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪ್ರಾಕೃತಿಕ ವಿಕೋಪ ಸಭೆ ನಡೆಸಿಲ್ಲ. ನೆರೆ ಪೀಡಿತರ ರಕ್ಷಣೆಗೆ ಬೋಟ್ ಕೂಡ ಇಲ್ಲ, ಖಾಸಗಿ ಬೋಟ್ ನವರಿಗೆ ದುಡ್ಡು ಕೊಟ್ಟು ತರಿಸುವಂತಹ ಅನಿವಾರ್ಯತೆ ಇದ್ದು ಸಚಿವರು ಆದಷ್ಟು ಬೇಗನೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ, ಸ್ಥಳೀಯರಾದ ಪುರುಷೋತ್ತಮ ಕಲ್ಲಾಪು ಇದ್ದರು.
Heavy rains in Mangaluru, Kalapu flooded with water in Ullal, MLA Khader visits spot
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm