ಬ್ರೇಕಿಂಗ್ ನ್ಯೂಸ್
05-07-22 09:35 pm Mangalore Correspondent ಕರಾವಳಿ
ಉಳ್ಳಾಲ, ಜು.5: ನಿರಂತರ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ತೊಕ್ಕೊಟ್ಟು ಬಳಿಯ ಕಲ್ಲಾಪು ಪ್ರದೇಶ ಜಲಾವೃತವಾಗಿದ್ದು ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ.
ಕಲ್ಲಾಪು ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಯು.ಟಿ ಖಾದರ್, ಪ್ರಾಕೃತಿಕ ವಿಕೋಪ ಸಭೆ ನಡೆಸದ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗರಂ ಆಗಿದ್ದಾರೆ. ಕಲ್ಲಾಪಿನ ಸುಮಾರು ಐವತ್ತಕ್ಕೂ ಹೆಚ್ಚಿನ ಮನೆಗಳು, ಸಭಾಂಗಣ, ವಾಣಿಜ್ಯ ಕಟ್ಟಡಗಳು ಜಲಾವೃತಗೊಂಡಿವೆ. ಪ್ರತೀ ವರ್ಷವೂ ಈ ಪ್ರದೇಶಗಳು ಮಳೆಗಾಲದಲ್ಲಿ ನೆರೆಗೆ ಜಲಾವೃತಗೊಳ್ಳುತ್ತದೆ.





ಸ್ಥಳೀಯರಾದ ಮಹಮ್ಮದ್ ತಯ್ಯುಬ್ ಹೇಳುವ ಪ್ರಕಾರ ಈ ಬಾರಿ ಇನ್ನೂ ನೆರೆ ಬಂದಿಲ್ಲ. ಅಸಮರ್ಪಕ ಚರಂಡಿಗಳಲ್ಲಿ ನೀರು ಹರಿಯದ ಪರಿಣಾಮ ಪ್ರದೇಶ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಂಡ ವೇಳೆ ಕಲ್ಲಾಪುವಿನ ರಸ್ತೆ ಬದಿಯಲ್ಲಿದ್ದ ರಾಜ ಕಾಲುವೆ ಮುಚ್ಚಲ್ಪಟ್ಟಿದ್ದು ಇದರಿಂದ ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ಹರಿಯದೆ ಕೃತಕ ನೆರೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಅಲವತ್ತುಕೊಂಡಿದ್ದಾರೆ.
ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೆರ್ಮನ್ನೂರು ಗ್ರಾಮಕರಣಿಕೆ ಶ್ವೇತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಹೆದ್ದಾರಿ ಬದಿಯ ರಾಜಕಾಲುವೆಯನ್ನ ಸರಿಪಡಿಸಲು ಸೂಚಿಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕರಾವಳಿಯಲ್ಲಿ ಬಹಳಷ್ಟು ಸಮಸ್ಯೆಗಳು ಎದುರಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪ್ರಾಕೃತಿಕ ವಿಕೋಪ ಸಭೆ ನಡೆಸಿಲ್ಲ. ನೆರೆ ಪೀಡಿತರ ರಕ್ಷಣೆಗೆ ಬೋಟ್ ಕೂಡ ಇಲ್ಲ, ಖಾಸಗಿ ಬೋಟ್ ನವರಿಗೆ ದುಡ್ಡು ಕೊಟ್ಟು ತರಿಸುವಂತಹ ಅನಿವಾರ್ಯತೆ ಇದ್ದು ಸಚಿವರು ಆದಷ್ಟು ಬೇಗನೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ, ಸ್ಥಳೀಯರಾದ ಪುರುಷೋತ್ತಮ ಕಲ್ಲಾಪು ಇದ್ದರು.
Heavy rains in Mangaluru, Kalapu flooded with water in Ullal, MLA Khader visits spot
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm