ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm