ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm