ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm