ಬ್ರೇಕಿಂಗ್ ನ್ಯೂಸ್
01-10-20 03:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 1: ಕರೊನಾ ವೈರಸ್ಗೆ ಇಡೀ ಮಾನವ ಸಂಕುಲವೇ ನಡುಗುತ್ತಿದ್ದರೆ, ಇತ್ತ ಹಳ್ಳಿ ಪ್ರದೇಶಗಳಲ್ಲಿ ನಾಯಿಗಳಿಗೆ ಮಿದುಳು ಜ್ವರ ಕಾಣಿಸಿಕೊಂಡಿದ್ದು ಸಾಮೂಹಿಕವಾಗಿ ಬಲಿಯಾಗುತ್ತಿವೆ.
ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಈ ವೈರಸ್ ಕಾಣಿಸಿಕೊಂಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ನಾಯಿಗಳು ಬಲಿಯಾಗುತ್ತಿವೆ. ಪರಿಣಾಮ ಸಾಕು ನಾಯಿಗಳಿಗೂ ಈ ರೋಗ ಆವರಿಸುವ ಸಾಧ್ಯತೆ ಕಂಡುಬಂದಿದ್ದು ಜನರಲ್ಲಿ ಭೀತಿ ಕಾಡಲಾರಂಭಿಸಿದೆ. ಇದೊಂದು ವೈರಸ್ ದಾಳಿಯಾಗಿದ್ದು ಮೂರು ತಿಂಗಳ ಮೊದಲೇ ನಾಯಿಗಳು ರೋಗಕ್ಕೆ ತುತ್ತಾದರೂ ಆರಂಭದಲ್ಲಿ ಯಾವುದೇ ಲಕ್ಷಣ ಗೋಚರಿಸುವುದಿಲ್ಲ. ಕೊನೆಯ ಹತ್ತರಿಂದ ಹದಿನೈದು ದಿನಗಳಲ್ಲಿ ರೋಗ ಉಲ್ಭಣಿಸಿ ನಾಯಿಗಳು ಸಾವನ್ನಪ್ಪುತ್ತವೆ.

ವೈರಸ್ಗೆ ತುತ್ತಾದ ನಾಯಿಗಳು ರೇಬಿಸ್ ಪೀಡಿತ ನಾಯಿಯಂತೆ ವರ್ತಿಸುತ್ತಿದ್ದು, ಸಾಕು ನಾಯಿಗಳ ಮೇಲೆ ದಾಳಿ ಮಾಡುತ್ತವೆ. ಆ ಮೂಲಕ ರೋಗ ಒಂದರಿಂದ ಇನ್ನೊಂದಕ್ಕೆ ಹರಡುತ್ತಿದ್ದು, ಸಾಕುನಾಯಿ ಮಾಲೀಕರನ್ನು ಆತಂಕಕ್ಕೀಡು ಮಾಡುತ್ತಿದೆ. ಮೂಗಿನಿಂದ ಕೀವು ಬರಲು ಆರಂಭವಾಗುತ್ತದೆ ಮತ್ತು ಬಾಯಿಯಿಂದಲೂ ಕೀವು ಮಿಶ್ರಿತ ನೀರು ನಾಯಿ ಸಂಚರಿಸಿದ ಉದ್ದಕ್ಕೂ ಬೀಳುವುದರ ಪರಿಣಾಮ ರೋಗ ಹರಡುತ್ತದೆ. ಇಂಥ ಮಿದುಳು ಜ್ವರದ ಹಾವಳಿ ಈಗ ಪುತ್ತೂರು, ಸುಳ್ಯದಲ್ಲಿ ಹೆಚ್ಚಿದ್ದು ಜನರಲ್ಲಿ ಭೀತಿ ಮೂಡಿಸಿದೆ.
ಈ ರೋಗದಿಂದ ಮನುಷ್ಯರಿಗೆ ಅಪಾಯವಿಲ್ಲ. ಬೇಸಿಗೆಯಲ್ಲಿ ರೋಗ ಹೆಚ್ಚಾಗಿ ಉಲ್ಭಣಿಸುತ್ತದೆ. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್ ವ್ಯಾಕ್ಸೀನ್ ನೀಡಬೇಕಾಗುತ್ತದೆ. ಬಳಿಕ 90 ದಿನ ಹಾಗೂ ನಂತರ ಪ್ರತಿ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರ ಮೂಲಕ ನಾಯಿಗಳನ್ನು ರೋಗದಿಂದ ರಕ್ಷಿಸಬಹುದು ಪಶು ವೈದ್ಯ ಡಾ.ಧರ್ಮಪಾಲ ಹೇಳುತ್ತಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm