ಬ್ರೇಕಿಂಗ್ ನ್ಯೂಸ್
07-07-22 01:01 pm Mangalore Correspondent ಕರಾವಳಿ
ಉಳ್ಳಾಲ, ಜು.7: ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ಮುಂದುವರೆದಿದ್ದು ಗೆಸ್ಟ್ ಹೌಸ್ ಮಾಲಕರು ಮಾತ್ರ ಸಮದ್ರ ತೀರಕ್ಕೆ ಕಲ್ಲು ಹಾಕಿ ತಮ್ಮ ಕಟ್ಟಡ ರಕ್ಷಿಸಲು ಮುಂದಾಗಿದ್ದು ಸ್ಥಳೀಯರು ಇದನ್ನ ವಿರೋಧಿಸಿ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.
ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತದ ತೀವ್ರತೆಗೆ ಬೀಚ್ ರಸ್ತೆಯೇ ಕೊಚ್ಚಿ ಹೋಗಿದ್ದು ಸಮಾರು ಐವತ್ತರಷ್ಟು ಮನೆಗಳು ಅಪಾಯದಲ್ಲಿವೆ. ಇದೇ ಜಾಗದ ತೀರದಲ್ಲಿರುವ ವಿಟಮಿನ್ ಸೀ ಹೆಸರಿನ ಗೆಸ್ಟ್ ಹೌಸ್ ಕೂಡ ಈಗ ಸಮುದ್ರಪಾಲಾಗುವ ಭೀತಿಯಲ್ಲಿದ್ದು ಅದರ ಮಾಲಕರು ಕಟ್ಟಡ ಉಳಿಸಲಿಕ್ಕಾಗಿ ಸಮುದ್ರಕ್ಕೆ ಹಿಟಾಚಿ ಯಂತ್ರದ ಮೂಲಕ ಕಲ್ಲು ಹಾಕಲಾರಂಭಿಸಿದ್ದಾರೆ. ಸರಕಾರಿ ಜಾಗದಲ್ಲಿ ಖಾಸಗಿಯವರು ನಿಯಮ ಉಲ್ಲಂಘಿಸಿ ರಕ್ಷಣಾ ಕಾರ್ಯ ನಡೆಸುವುದನ್ನ ವಿರೋಧಿಸಿದ ಸ್ಥಳೀಯರು ಕಾಮಗಾರಿಯನ್ನ ಸ್ಥಗಿತಗೊಳಿಸಿದ್ದು ತಹಶೀಲ್ದಾರ್ ಅವರಿಗೆ ಈ ಬಗ್ಗೆ ದೂರು ನೀಡಿದ್ದಾರೆ.
ಗೆಸ್ಟ್ ಹೌಸ್ ಮಾಲಕರ ವಿರುದ್ದ ಕೇಸು ದಾಖಲಿಸುವುದಾಗಿ ತಹಶೀಲ್ದಾರ್ ಸ್ಥಳೀಯರಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಸ್ಥಳೀಯರಾದ ಸುನಿಲ್ ಉಚ್ಚಿಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಬಡವರ ಮನೆಗಳ ರಕ್ಷಣೆಗಾಗಿ ಇಷ್ಟು ದಿವಸ ಸರಕಾರದಿಂದ ಸಣ್ಣ ರಕ್ಷಣಾ ಕಾರ್ಯವನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಶಾಸಕ ಖಾದರ್ ನಿನ್ನೆ ಭೇಟಿ ನೀಡಿದ್ದು ರಕ್ಷಣಾ ಕಾರ್ಯದಲ್ಲಿ ತನ್ನ ಅಸಹಾಯಕತೆ ತೋರ್ಪಡಿಸಿದ್ದು ಸರಕಾರ ನಮ್ಮದಲ್ಲ. ನನಗೇನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಬಿಜೆಪಿ ಕಡೆಯವರು ಶಾಸಕರಿಗೆ ಸಂಪೂರ್ಣ ತಾಕತ್ತಿದೆ ಎಂದು ಹೇಳುತ್ತಾರೆ. ಹಾಗಾದರೆ ಕಡಲ್ಕೊರೆತಕ್ಕೆ ಪರಿಹಾರ ಒದಗಿಸುವವರು ಯಾರು?ಖಾಸಗಿಯವರು ಇಲ್ಲಿ ಅಕ್ರಮ ಗೆಸ್ಟ್ ಹೌಸ್ಗಳನ್ನು ನಿರ್ಮಿಸಿ ದರ್ಪ ಮೆರೆಯುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತು ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಲಿದ್ದು ಸ್ಥಳೀಯರು ಆಕ್ರೋಶ ತೋರಿಸಲು ಸಜ್ಜಾಗಿದ್ದಾರೆ.
Heavy rains in Mangalore causes extreme soil erosion at Batapady Beach in Ullal.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm