ಬ್ರೇಕಿಂಗ್ ನ್ಯೂಸ್
07-07-22 07:40 pm Mangalore Correspondent ಕರಾವಳಿ
ಉಳ್ಳಾಲ, ಜು.7 : ರಾಜ್ಯದಲ್ಲಿ ಬಿಜೆಪಿ ಹತ್ತು ವರ್ಷ ಅಷ್ಟೇ ಆಡಳಿತ ನಡೆಸಿದೆ. ಕಳೆದ ಅರುವತ್ತು ವರುಷದಿಂದಲೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಕಡಲೂ ಇತ್ತು, ಕೊರೆತನೂ ಇತ್ತು. ಕಾಂಗ್ರೆಸ್ಸೂ ಇತ್ತು. ಹಾಗಿದ್ರೂ ಕಡಲ್ಕೊರೆತಕ್ಕೆ ಪರಿಹಾರ ಯಾಕೆ ಕೈಗೊಂಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರಿಗೆ ಟಾಂಗ್ ನೀಡಿದ್ದಾರೆ.
ಅವರಿಂದು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ, ಉಳ್ಳಾಲದ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅವಲೋಕನ ನಡೆಸಿದರು. ಉಳ್ಳಾಲದ ಶಾಸಕ ಯು.ಟಿ.ಖಾದರ್ ಅವರು ಚುನಾವಣೆ ದೃಷ್ಟಿ ಮುಂದಿಟ್ಟು ಸುಮ್ಮನೆ ಆಪಾದನೆ ಮಾಡೋದನ್ನ ಬಿಡಲಿ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಪ್ರದೇಶಗಳಿಗೆ ಏನ್ ಮಾಡಿದ್ದಾರೆ ಎಂದು ಜನರಿಗೆ ತಿಳಿದಿದೆ. ಸರಕಾರದ ವಿರುದ್ಧ ಟೀಕೆ, ಟಿಪ್ಪಣಿ ಸಹಜ. ನಾವು ರಾಜಕೀಯ ಮಾಡಲ್ಲ. ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರನೂ ಒದಗಿಸುತ್ತೇವೆ. ತಜ್ಞರ ತಂಡದಿಂದ ಸಮೀಕ್ಷೆ ನಡೆಸಿ ಮುಖ್ಯಮಂತ್ರಿಗಳಲ್ಲಿ ಮಾತನಾಡಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು.




ಈ ಬಾರಿ ಏಳು ಜಿಲ್ಲೆಗಳಲ್ಲಿ ಬಹಳಷ್ಟು ಮಳೆ ಆಗಿದ್ದು, ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ಕೊಟ್ಟಿದ್ದೇನೆ. ಮನೆ ಕಳಕೊಂಡವರಿಗೆ NDRF ನಿಯಮ ಪ್ರಕಾರ ಈ ಹಿಂದೆ 95,000 ಪರಿಹಾರ ಇದ್ದು ಮುಖ್ಯಂತ್ರಿಗಳಲ್ಲಿ ಮಾತನಾಡಿ ಅದನ್ನ 5 ಲಕ್ಷಕ್ಕೆ ಏರಿಸಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಆದೇಶಿಸಿರುವುದಾಗಿ ಹೇಳಿದರು.





ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ಸಮುದ್ರ ತೀರದ ನಿವಾಸಿಗಳ ರಕ್ಷಣೆಗೆ ನಾವು ಆದ್ಯತೆ ನೀಡುತ್ತೇವೆಯೇ ಹೊರತು ರೆಸಾರ್ಟ್ ಗಳ ರಕ್ಷಣೆಗೆ ಆದ್ಯತೆ ನೀಡಲ್ಲ ಎಂದರು.
ಬಂದರು ಸಚಿವ ಎಸ್.ಅಂಗಾರ, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಜೊತೆಯಲ್ಲಿದ್ದರು.
Minister Ashok in Ullal Mangalore, taunts MLA UT Khader, says what has congress done to control sea erosion during his visit in Mangaluru. He also said that people who have lost their homes and have been affected due to soil erosion will have packages from the government.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am