ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.


ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.


30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm