ಬ್ರೇಕಿಂಗ್ ನ್ಯೂಸ್
09-07-22 10:41 pm Mangalore Correspondent ಕರಾವಳಿ
ಮಂಗಳೂರು, ಜು.9 : ದ.ಕ. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ದೃಷ್ಟಿಯಿಂದ ರಜೆ ನೀಡಲಾಗುತ್ತಿದೆ. ಜಿಲ್ಲಾಡಳಿತದ ರಜೆ ಆದೇಶವನ್ನು ಸಂಬಂಧಿಸಿದ ಎಲ್ಲ ಶಾಲೆ, ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದಕ್ಕೆ ಯಾವುದೇ ಇಂಜಿನಿಯರಿಂಗ್ ಕಾಲೇಜು ಕೂಡ ಹೊರತಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಾಕೀತು ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರ ಜೊತೆಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆ ಹೇಗಿದೆ ಎನ್ನುವ ಬಗ್ಗೆ ಮೊದಲು ಸಮೀಕ್ಷೆ ಮಾಡಬೇಕು. ಯಾವ ಹಳ್ಳಿ, ಹಾಸ್ಟೆಲ್ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು. ಆದೇಶ ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಬಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ. ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು ಉಪಸ್ಥಿತರಿದ್ದರು.
Mangalore Dc Rajendra slams engineering colleges for not granting holiday to students amid rains.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm