ಬ್ರೇಕಿಂಗ್ ನ್ಯೂಸ್
10-07-22 02:07 pm Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರು ಹೊಳೆಗೆ ಬಿದ್ದ ಕಾರನ್ನು ಅಗ್ನಿಶಾಮಕ ಸಿಬಂದಿ ಪತ್ತೆ ಮಾಡಿದ್ದು ಹಗ್ಗ ಕಟ್ಟಿ ಹೊಳೆಯಿಂದ ಮೇಲಕ್ಕೆ ಎಳೆದಿದ್ದಾರೆ. ಅದರಲ್ಲಿ ಇಬ್ಬರು ಯುವಕರಿದ್ದು ವಿಟ್ಲದ ನಿವಾಸಿಗಳೆಂದು ಪತ್ತೆ ಮಾಡಲಾಗಿದೆ.
ಕಾರಿನಲ್ಲಿದ್ದವರು ವಿಟ್ಲ ಬಳಿಯ ಕುಂಡಡ್ಕ ನಿವಾಸಿ ಧನುಷ್ (26) ಮತ್ತು ಆತನ ಸೋದರ ಸಂಬಂಧಿ ಮಂಜೇಶ್ವರ ಮೂಲದ ಧನುಷ್ (21) ಎಂದು ಪತ್ತೆ ಮಾಡಲಾಗಿದೆ. ಅವರ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರು, ಅಗ್ನಿಶಾಮಕ ದಳ ಹುಡುಕಾಟ ಕಾರ್ಯಾಚರಣೆ ಮುಂದುವರಿಸಿದೆ.
ಕಾರ್ಯಾಚರಣೆ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಮಸೀದಿ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳ ಮೇಲೆ ನಿಂತು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಬೈತಡ್ಕ ಸೇತುವೆಯಿಂದ ಕಾರು ಹೊಳೆಗೆ ಬಿದ್ದಿದ್ದು ಅಲ್ಲಿಂದ 500 ಮೀಟರ್ ದೂರದಲ್ಲಿ ಕಾರು ಪತ್ತೆಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿದ್ದು ಸ್ಥಳೀಯರು, ಪೊಲೀಸರು ಹಗ್ಗ ಕಟ್ಟಿ ಮೇಲಕ್ಕೆತ್ತಿದ್ದಾರೆ. ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದಿತ್ತು.
ಇಬ್ಬರು ಯುವಕರು ವಿಟ್ಲ ಕಡೆಯಿಂದ ಶನಿವಾರ ರಾತ್ರಿ ಪುತ್ತೂರಿಗೆ ತೆರಳಿದ್ದರು. ಬೆಳಗ್ಗೆಯೇ ಕಾರು ಬಿದ್ದಿರುವುದು ಗೊತ್ತಾಗಿದೆ. ಇಬ್ಬರದ್ದೂ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಘಟನಾ ಸ್ಥಳಕ್ಕೆ ಬಂದಿದ್ದ ಯುವಕರ ಸಂಬಂಧಿಕರು ತಿಳಿಸಿದ್ದಾರೆ.
ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ಕಾಣಿಯೂರಿನ ಬೈತಡ್ಕದಲ್ಲಿ ಹೊಳೆಗೆ ಬಿದ್ದಿತ್ತು. ಈ ವಿಚಾರ ಯಾರದೇ ಗಮನಕ್ಕೆ ಬಂದಿರಲಿಲ್ಲ. ಬೆಳಗ್ಗೆ ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಕಂಡುಬಂದಿದ್ದು ಸ್ಥಳೀಯರು ಪಕ್ಕದ ಮಸೀದಿ ಕಟ್ಟಡದ ಸಿಸಿಟಿವಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ, ಮಸೀದಿ ಸಿಸಿ ಕ್ಯಾಮರಾದಲ್ಲಿ ಕಾರು ವೇಗವಾಗಿ ಬಂದು ಹೊಳೆಗೆ ಬೀಳುತ್ತಿರುವ ದೃಶ್ಯ ಸೆರೆಯಾಗಿತ್ತು. ಕಾಣಿಯೂರು ಹೊಳೆ ಮುಂದೆ ಕುಮಾರಧಾರಾ ನದಿಗೆ ಸೇರುತ್ತಿದ್ದು ಮಳೆಯಿಂದಾಗಿ ಉಕ್ಕಿ ಹರಿಯುತ್ತಿದೆ. ಇಬ್ಬರು ಯುವಕರು ಹೊಳೆಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Speeding car falls into river in Puttur, car found, two youths from Vitla missing, search is on. Last night as they were passing a bridge the car lost control and fell into the river. The fire brigade team after extreme search in the rains found the car. But the youths are said to be washed away due to heavy rains.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm