ಬ್ರೇಕಿಂಗ್ ನ್ಯೂಸ್
10-07-22 02:07 pm Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರು ಹೊಳೆಗೆ ಬಿದ್ದ ಕಾರನ್ನು ಅಗ್ನಿಶಾಮಕ ಸಿಬಂದಿ ಪತ್ತೆ ಮಾಡಿದ್ದು ಹಗ್ಗ ಕಟ್ಟಿ ಹೊಳೆಯಿಂದ ಮೇಲಕ್ಕೆ ಎಳೆದಿದ್ದಾರೆ. ಅದರಲ್ಲಿ ಇಬ್ಬರು ಯುವಕರಿದ್ದು ವಿಟ್ಲದ ನಿವಾಸಿಗಳೆಂದು ಪತ್ತೆ ಮಾಡಲಾಗಿದೆ.
ಕಾರಿನಲ್ಲಿದ್ದವರು ವಿಟ್ಲ ಬಳಿಯ ಕುಂಡಡ್ಕ ನಿವಾಸಿ ಧನುಷ್ (26) ಮತ್ತು ಆತನ ಸೋದರ ಸಂಬಂಧಿ ಮಂಜೇಶ್ವರ ಮೂಲದ ಧನುಷ್ (21) ಎಂದು ಪತ್ತೆ ಮಾಡಲಾಗಿದೆ. ಅವರ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರು, ಅಗ್ನಿಶಾಮಕ ದಳ ಹುಡುಕಾಟ ಕಾರ್ಯಾಚರಣೆ ಮುಂದುವರಿಸಿದೆ.


ಕಾರ್ಯಾಚರಣೆ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಮಸೀದಿ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳ ಮೇಲೆ ನಿಂತು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.


ಬೈತಡ್ಕ ಸೇತುವೆಯಿಂದ ಕಾರು ಹೊಳೆಗೆ ಬಿದ್ದಿದ್ದು ಅಲ್ಲಿಂದ 500 ಮೀಟರ್ ದೂರದಲ್ಲಿ ಕಾರು ಪತ್ತೆಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿದ್ದು ಸ್ಥಳೀಯರು, ಪೊಲೀಸರು ಹಗ್ಗ ಕಟ್ಟಿ ಮೇಲಕ್ಕೆತ್ತಿದ್ದಾರೆ. ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದಿತ್ತು.


ಇಬ್ಬರು ಯುವಕರು ವಿಟ್ಲ ಕಡೆಯಿಂದ ಶನಿವಾರ ರಾತ್ರಿ ಪುತ್ತೂರಿಗೆ ತೆರಳಿದ್ದರು. ಬೆಳಗ್ಗೆಯೇ ಕಾರು ಬಿದ್ದಿರುವುದು ಗೊತ್ತಾಗಿದೆ. ಇಬ್ಬರದ್ದೂ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಘಟನಾ ಸ್ಥಳಕ್ಕೆ ಬಂದಿದ್ದ ಯುವಕರ ಸಂಬಂಧಿಕರು ತಿಳಿಸಿದ್ದಾರೆ.


ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ಕಾಣಿಯೂರಿನ ಬೈತಡ್ಕದಲ್ಲಿ ಹೊಳೆಗೆ ಬಿದ್ದಿತ್ತು. ಈ ವಿಚಾರ ಯಾರದೇ ಗಮನಕ್ಕೆ ಬಂದಿರಲಿಲ್ಲ. ಬೆಳಗ್ಗೆ ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಕಂಡುಬಂದಿದ್ದು ಸ್ಥಳೀಯರು ಪಕ್ಕದ ಮಸೀದಿ ಕಟ್ಟಡದ ಸಿಸಿಟಿವಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ, ಮಸೀದಿ ಸಿಸಿ ಕ್ಯಾಮರಾದಲ್ಲಿ ಕಾರು ವೇಗವಾಗಿ ಬಂದು ಹೊಳೆಗೆ ಬೀಳುತ್ತಿರುವ ದೃಶ್ಯ ಸೆರೆಯಾಗಿತ್ತು. ಕಾಣಿಯೂರು ಹೊಳೆ ಮುಂದೆ ಕುಮಾರಧಾರಾ ನದಿಗೆ ಸೇರುತ್ತಿದ್ದು ಮಳೆಯಿಂದಾಗಿ ಉಕ್ಕಿ ಹರಿಯುತ್ತಿದೆ. ಇಬ್ಬರು ಯುವಕರು ಹೊಳೆಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Speeding car falls into river in Puttur, car found, two youths from Vitla missing, search is on. Last night as they were passing a bridge the car lost control and fell into the river. The fire brigade team after extreme search in the rains found the car. But the youths are said to be washed away due to heavy rains.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm