ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.


ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm