ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.


ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm