ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.


ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm