ಬ್ರೇಕಿಂಗ್ ನ್ಯೂಸ್
12-07-22 09:18 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಕಡಲ್ಕೊರೆತ ಸಮಸ್ಯೆ ಎದುರಿಸುತ್ತಿರುವ ಉಳ್ಳಾಲದ ಪ್ರದೇಶಗಳಿಗೆ ಭೇಟಿ ನೀಡುವ ನೆಪದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾತ್ರಿ ವೇಳೆ ಆಗಮಿಸಿದ್ದು, ವೀಕ್ಷಣೆಯ ನಾಟಕ ಮಾಡಿ ಮುಗಿಸಿದ್ದಾರೆ. ರಾತ್ರಿ 7.30ರ ವೇಳೆಗೆ ಮುಖ್ಯಮಂತ್ರಿ ಉಳ್ಳಾಲ ತಲುಪಿದ್ದು, ಕ್ಷೇತ್ರದ ಶಾಸಕ ಯುಟಿ ಖಾದರ್ ಬರಮಾಡಿಕೊಂಡಿದ್ದಾರೆ. ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಕಂದಾಯ ಸಚಿವ ಆರ್.ಅಶೋಕ್ ಜೊತೆಗೆ ಆಗಮಿಸಿದ್ದರು. ಸಿಎಂ ಬೊಮ್ಮಾಯಿ ಉಳ್ಳಾಲಕ್ಕೆ ತಲುಪುತ್ತಿದ್ದಂತೆ ಇಡೀ ದಿನ ಕಾಣೆಯಾಗಿದ್ದ ಮಳೆರಾಯನೂ ಬಿರುಗಾಳಿಯೊಂದಿಗೆ ಬಂದಿದ್ದು ಕರಾವಳಿಯ ಬಿರುಮಳೆಯ ದರ್ಶನವನ್ನೂ ಮುಖ್ಯಮಂತ್ರಿಗೆ ಮಾಡಿಸಿದ್ದಾನೆ.
ಆಬಳಿಕ ಬಟ್ಟಂಪಾಡಿಯ ರೆಸಾರ್ಟ್ ಇರುವಲ್ಲಿಗೆ ತಲುಪಿದ್ದು, ಅಲ್ಲಿನ ದುರವಸ್ಥೆಯನ್ನು ಸ್ಥಳೀಯ ಅಧಿಕಾರಿಗಳು, ಶಾಸಕರು ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದಾರೆ. ರಸ್ತೆ ನುಂಗಿ ಹಾಕಿರುವ ಕಡಲಿನ ಧಾವಂತ ಮತ್ತು ಆ ಭಾಗದಲ್ಲಿ ಪ್ರತಿವರ್ಷ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಈ ಹಿಂದೆ ಉಳ್ಳಾಲದಲ್ಲಿ ನಡೆದಿದ್ದ ಎಡಿಬಿ ಕಾಮಗಾರಿಯಲ್ಲಿ ಅವ್ಯವಹಾರ ಆಗಿರುವ ಬಗ್ಗೆಯೂ ಕೆಲವು ಬಿಜೆಪಿಗರು ಮುಖ್ಯಮಂತ್ರಿ ಕಿವಿ ಮುಟ್ಟಿಸಿದ್ದಾರೆ.





ಆನಂತರ, ಅಲ್ಲಿಯೇ ಕಡಲ ತೀರದ ರೆಸಾರ್ಟ್ ಮುಂಭಾಗದಲ್ಲಿ ನಿಂತು ಮಾಧ್ಯಮಗಳನ್ನುದ್ದೇಶಿಸಿ ಸಿಎಂ ಕಡಲಿನಬ್ಬರದ ಸದ್ದಿನ ನಡುವೆಯೇ ಮಾತನಾಡಿದ್ದಾರೆ. ಕೊಡಗು- ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪ ಮತ್ತು ಮಳೆಹಾನಿಯನ್ನು ವೀಕ್ಷಣೆ ಮಾಡಿದ್ದೇನೆ. ಭೂಕಂಪದ ಬಗ್ಗೆ ಅಧ್ಯಯನ ನಡೆಸಲು ಮೂರ್ನಾಲ್ಕು ಸಂಸ್ಥೆಗಳಿಗೆ ವಹಿಸಿದ್ದು, ಅಧ್ಯಯನ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆಯಿದ್ದು, ಶಾಶ್ವತ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸುತ್ತೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.




ಕಡಲ್ಕೊರೆತ ಸಮಸ್ಯೆಗೆ ಈ ಹಿಂದೆ ಎಡಿಬಿ ಸಾಲದಲ್ಲಿ ಕೈಗೊಂಡಿದ್ದ ಕಾಮಗಾರಿ ಸರಿಯಾಗಿ ನಡೆದಿಲ್ಲ ಅನ್ನುವ ಆರೋಪ ಇದೆ ಎಂದು ಹೇಳಿದ ಮುಖ್ಯಮಂತ್ರಿ, ಹೊಸ ತಂತ್ರಜ್ಞಾನವನ್ನು ಇದೇ ಪ್ರದೇಶದಲ್ಲಿ ಅಳವಡಿಸಲು ಅನುಮತಿ ನೀಡಲಾಗಿದೆ. ಸೀ ವೇವ್ ಬ್ರೇಕರ್ಸ್ ತಂತ್ರಜ್ಞಾನವನ್ನು ಬಟ್ಟಂಪಾಡಿಯಲ್ಲೇ ಜಾರಿಗೊಳಿಸಲಾಗುವುದು. ಶಾಶ್ವತ ಯೋಜನೆ ಕೈಗೊಳ್ಳಲು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು. ರಸ್ತೆ ಕಡಿತ ಆಗಿರುವಲ್ಲಿ ಜನರ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗುವುದು. ಕಡಲ ತೀರದಲ್ಲಿ ಅಪಾಯ ಎದುರಿಸುತ್ತಿರುವ ಮನೆಗಳನ್ನು ತೆರವು ಮಾಡಬೇಕು. ಮುಂದಿನ ತಿಂಗಳು ಮತ್ತಷ್ಟು ಮಳೆಯಾದಲ್ಲಿ ಇನ್ನಷ್ಟು ಹಾನಿಯಾಗುತ್ತದೆ. ಹಾಗಾಗಿ ಮತ್ತೆ ರಿಸ್ಕ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
CM Bommai in Mangalore, inspects rain damages and sea erosion affected areas in Ullal. Revenue Minister R Ashok, Energy Minister V Sunil Kumar, Fisheries Minister S Angara, Public Works Minister CC Patil, State BJP President and Mangaluru MP Nalin Kumar Kateel accompanied the Chief Minister during his visit.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm