ಬ್ರೇಕಿಂಗ್ ನ್ಯೂಸ್
13-07-22 07:14 pm Mangalore Correspondent ಕರಾವಳಿ
ಮಂಗಳೂರು, ಜುಲೈ 13: ಕರ್ತವ್ಯದ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ ನೀರಾವರಿ ಇಲಾಖೆಯ ನಿವೃತ್ತ ಇಂಜಿನಿಯರ್ ಒಬ್ಬರಿಗೆ ಮಂಗಳೂರಿನ ನ್ಯಾಯಾಲಯ ಆರು ವರ್ಷಗಳ ಸಾದಾ ಶಿಕ್ಷೆ ಮತ್ತು 2.5 ಕೋಟಿ ರೂಪಾಯಿ ದಂಡ ವಿಧಿಸಿದೆ.
ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಈ ಆದೇಶ ಮಾಡಿದ್ದಾರೆ. ಮಂಗಳೂರಿನ ಸಣ್ಣ ನೀರಾವರಿ ಇಲಾಖೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿದ್ದ ಎನ್.ಟಿ.ರಾಜಗೋಪಾಲ್ ಎಂಬವರು ಶಿಕ್ಷೆಗೊಳಗಾದವರು.
2010ರ ಮಾರ್ಚ್ 18ರಂದು ಆಗಿನ ಲೋಕಾಯುಕ್ತ ಡಿವೈಎಸ್ಪಿಯಾಗಿದ್ದ ಸದಾನಂದ ವೆರ್ಣೇಕರ್ ಉಡುಪಿ ಮತ್ತು ಮಂಗಳೂರಿನಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಆಗ ಮಂಗಳೂರಿನ ಸಣ್ಣ ನೀರಾವರಿ ಇಲಾಖೆಯಲ್ಲಿದ್ದ ಎನ್.ಟಿ.ರಾಜಗೋಪಾಲ್ ಅದಕ್ಕೂ ಹಿಂದೆ ಉಡುಪಿಯಲ್ಲಿ ಸುದೀರ್ಘ ಅವಧಿ ಕರ್ತವ್ಯದಲ್ಲಿದ್ದರು. ಉಡುಪಿಯಲ್ಲಿದ್ದಾಗ ಅಂಬಾಗಿಲು, ಕನ್ನರ್ಪಾಡಿ, ಕಿನ್ನಿಬಾಗಿಲುವಿನಲ್ಲಿ ಮನೆ ನಿರ್ಮಿಸಿಕೊಂಡಿದ್ದರು. ಅಲ್ಲದೆ, ಶಿವಮೊಗ್ಗದಲ್ಲಿಯೂ ಮನೆ ನಿರ್ಮಿಸಿದ್ದು, ನಾಲ್ಕು ಮನೆ ಮತ್ತು ಕಚೇರಿಗಳಿಗೆ ಲೋಕಾಯುಕ್ತ ದಾಳಿ ನಡೆದಿತ್ತು. ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪತ್ತೆಯಾಗಿದ್ದವು. ಕಚೇರಿಯಲ್ಲಿ ಎರಡು ಕ್ರೆಡಿಟ್ ಕಾರ್ಡ್ ಮತ್ತು 20 ಸಾವಿರ ನಗದು ಪತ್ತೆಯಾಗಿತ್ತು.

ಅದೇ ದಿನ ರಾಜ್ಯದ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ಮೇಲೆ ಆಗಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ದಾಳಿಯಾಗಿತ್ತು. ಅದರಲ್ಲಿ ಅತಿ ಹೆಚ್ಚು ಅಕ್ರಮ ಆಸ್ತಿ ಸಿಕ್ಕಿದ್ದು ಮಂಗಳೂರಿನಲ್ಲಿ ನೀರಾವರಿ ಇಂಜಿನಿಯರ್ ಆಗಿದ್ದ ಎನ್.ಟಿ.ರಾಜಗೋಪಾಲ್ ಬಳಿ. ಅಂದು ಒಂದೇ ದಿನ 1.26 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆ ಲೋಕಾಯುಕ್ತ ಪತ್ತೆ ಮಾಡಿತ್ತು. ಪ್ರಕರಣದ ಬಗ್ಗೆ ಬಳಿಕ ಮಂಗಳೂರಿನ ಲೋಕಾಯುಕ್ತ ಡಿವೈಎಸ್ಪಿ ಸದಾನಂದ ವರ್ಣೇಕರ್, ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಂತೂ 2022ರ ಜುಲೈ 12ರಂದು ಶಿಕ್ಷೆ ಘೋಷಣೆ ಮಾಡಿದೆ. ಅಲ್ಲದೆ, 2.5 ಕೋಟಿ ರೂ. ದಂಡ ತೆರಲು ತಪ್ಪಿದಲ್ಲಿ ಒಂದೂವರೆ ವರ್ಷ ಹೆಚ್ಚುವರಿಯಾಗಿ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ಹೇಳಿದೆ. ಅಕ್ರಮ ಆಸ್ತಿ ಗಳಿಸಿದ್ದ ಅಧಿಕಾರಿಯ ಆಸ್ತಿಯನ್ನೇ ದಂಡದ ರೂಪದಲ್ಲಿ ಕಟ್ಟುವಂತೆ ವಿಧಿಸಿದ ಕೋರ್ಟ್ ತೀರ್ಪು ಅತ್ಯಂತ ವಿರಳ.
ಲೋಕಾಯುಕ್ತದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದರು. 2016ರ ಅಕ್ಟೋಬರ್ 30ರಂದು ಎನ್.ಟಿ.ರಾಜಗೋಪಾಲ್ ಯಾದಗಿರಿ ಜಿಲ್ಲೆಯಲ್ಲಿ ನೀರಾವರಿ ಇಲಾಖೆಯ ಇಂಜಿನಿಯರ್ ಆಗಿ ನಿವೃತ್ತರಾಗಿದ್ದರು. ಇದೀಗ ಕೋರ್ಟ್ ಶಿಕ್ಷೆ ಘೋಷಣೆ ಮಾಡಿರುವುದರಿಂದ ರಾಜಗೋಪಾಲ್ ಅವರನ್ನು ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ತಳ್ಳಲಾಗಿದೆ.
A retired executive engineer of the minor Irrigation department was sentenced to six years of simple imprisonment and a penalty of Rs 2.5 crore by a city court.
Judge B B Jakati of the Third Additional District and Sessions Court of Mangaluru sentenced N T Rajagopal in a disproportionate asset case.The Karnataka Lokayukta Police had filed a chargesheet against N T Rajagopal on March 17, 2010 stating that the accused had amassed wealth disproportionate to his known source of income.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm