ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm