ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am