ಬ್ರೇಕಿಂಗ್ ನ್ಯೂಸ್
02-10-20 12:56 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 2: ಕೊರೊನ ಮತ್ತು ಡ್ರಗ್ಸ್ ಒಂದೇ ನಾಣ್ಯದ ಎರಡು ಮುಖಗಳಂತೆ. ಆದರೆ, ನಮ್ಮ ಮಕ್ಕಳ ಮುಂದೆ ಕೊರೊನಾ, ಡ್ರಗ್ಸ್ ಗಿಂತಲೂ ಮೊಬೈಲ್ ಫೋನ್ ತುಂಬಾ ಮಾರಕವಾಗಿ ಪರಿಣಮಿಸಿದೆ ಎಂದು ಕಾಪಿಕಾಡು ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಅಧ್ಯಕ್ಷ ಮಾಜಿ ರಾಷ್ಟ್ರೀಯ ಕಬಡ್ಡಿ ಪಟು ಗೋಪಿನಾಥ್ ಕಾಪಿಕಾಡು ಹೇಳಿದರು.
ಇಲ್ಲಿನ ತೊಕ್ಕೊಟ್ಟು ಕಾಪಿಕಾಡು ಬಳಿಯ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕೊರೊನಾ ಮತ್ತು ಡ್ರಗ್ಸ್ ಮುಕ್ತ ಭಾರತಕ್ಕಾಗಿ ಉಮಾಮಹೇಶ್ವರಿ ಕ್ಷೇತ್ರದಿಂದ ಉಳ್ಳಾಲ ಅಬ್ಬಕ್ಕ ವೃತ್ತದವರೆಗೆ ನಡೆದ ಕಾಲ್ನಡಿಗೆ ಜಾಗೃತಿ ಜಾಥಾವನ್ನುದ್ದೇಶಿಸಿ ಅವರು ಮಾತನಾಡಿದರು. ಜಗತ್ತನ್ನು ಇವತ್ತು ಕೊರೊನ ಆವರಿಸಿ ಜನರನ್ನು ಭಯಭೀತಿಗೊಳಿಸಿದೆ. ಡ್ರಗ್ಸ್ ಭೂತವು ನಮ್ಮ ಯುವ ಸಮುದಾಯವನ್ನು ಹಾಳುಗೆಡವುತ್ತಿದೆ. ನಮ್ಮ ಎಳೆಯ ಮಕ್ಕಳ ಕೈಯಲ್ಲಿ ಇವತ್ತು ಆನ್ ಲೈನ್ ನೆಪದಲ್ಲಿ ಮೊಬೈಲ್ ಪೋನನ್ನು ಕೊಡುತ್ತಿದ್ದು, ಮಕ್ಕಳಿಗೆ ಇದು ಕೊರೊನ, ಡ್ರಗ್ಸ್ ಗಿಂತಲೂ ಮಾರಕವಾಗಿದೆ. ಮಕ್ಕಳನ್ನು ಇಡೀ ದಿವಸ ಮೊಬೈಲಲ್ಲಿ ಇರಲು ಬಿಡದೆ, ವ್ಯಾಯಾಮ, ಯೋಗಗಳಲ್ಲಿ ತೊಡಗಿಸಿದಲ್ಲಿ ಸಧೃಡ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು.

ಮಾಜಿ ಸಚಿವ ಯು.ಟಿ ಖಾದರ್ ಮಾತನಾಡಿ ಮಕ್ಕಳು ಶೈಕ್ಷಣಿಕ ಜೀವನದೊಟ್ಟಿಗೆ ಕ್ರೀಡೆ, ಯೋಗ, ವ್ಯಾಯಾಮಗಳಲ್ಲಿ ತೊಡಗಿಸಿದಲ್ಲಿ ಶರೀರದಲ್ಲಿ ರೋಗನಿರೋಧಕ ಶಕ್ತಿ ಇಮ್ಮಡಿಗೊಳ್ಳುವುದರ ಜೊತೆಗೆ ಡ್ರಗ್ಸ್ ನಂತಹ ದುಷ್ಚಟಗಳಿಂದಲೂ ದೂರ ಉಳಿಯಬಹುದೆಂದು ಹೇಳಿದರು. ಉಳ್ಳಾಲ ನಗರಸಭೆ ಕೌನ್ಸಿಲರ್ ಕು.ಭವಾನಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಉಮಾಮಹೇಶ್ವರಿ ಕಬಡ್ಡಿ ಅಸೋಸಿಯೇಶನ್ ಚೇರ್ಮನ್ ಎ.ಜೆ ಶೇಖರ್, ಗೌರವ ಸಲಹೆಗಾರರಾದ ಈಶ್ವರ ಉಳ್ಳಾಲ್, ಪ್ರ. ಕಾರ್ಯದರ್ಶಿ ಸುನೀಲ್ ರೈ , ಪದಾಧಿಕಾರಿಗಳಾದ ದಿನೇಶ್ ರೈ ಕಳ್ಳಿಗೆ, ಪ್ರಕಾಶ್, ಹರೀಶ್ ಗಾಂಧಿನಗರ, ದಿನಕರ್ ಬಗಂಬಿಲ, ರಘುರಾಮ್ ಶೆಟ್ಟಿ, ಗಣೇಶ್ ಕಾಪಿಕಾಡು, ಅರುಣ್ ಗಾಂಧಿನಗರ ಮೊದಲಾದವರು ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am