ಬ್ರೇಕಿಂಗ್ ನ್ಯೂಸ್
02-10-20 01:50 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ತಕ್ಷಣವೇ ಅಲ್ಲಿನ ಸರಕಾರವನ್ನು ವಜಾಗೊಳಿಸಬೇಕು, ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ. ಉ. ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ರೈ ಈ ಆಗ್ರಹ ಮಾಡಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಹಲವೆಡೆ ದುರ್ಬಲರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವ್ಯವಸ್ಥೆ ಬರಗೆಟ್ಟು ಹೋಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದುರ್ಬಲ ವರ್ಗದವರ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚಿದ್ದು ದೇಶದ ದುರವಸ್ಥೆಯನ್ನು ತೋರಿಸುತ್ತಿದೆ. ಇವರ ಅಧಿಕಾರ ಅವಧಿಯಲ್ಲಿ ಪ್ರಬಲ ವರ್ಗದವರು ಅಪಾಯಕಾರಿಯಾಗುತ್ತಿದ್ದಾರೆ ಸಂಘ ಪರಿವಾರ ಅಧಿಕಾರದಲ್ಲಿರುವ ಕಡೆಯಲ್ಲಿ ಅಲ್ಲಿನ ಆಡಳಿತ ಪ್ರಬಲರ ರಕ್ಷಣೆಗೆ ಮುಂದಾಗುತ್ತಿದೆ. ಇದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಜೊತೆಗೆ ಆರ್ಥಿಕತೆಯೂ ಸಂಪೂರ್ಣ ಕುಸಿದಿದೆ. ಉತ್ತರ ಪ್ರದೇಶದಲ್ಲಿ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಅಲ್ಲಿನ ಆಡಳಿತ ವ್ಯವಸ್ಥೆಯನ್ನು ತೋರಿಸುತ್ತದೆ. ಆದಿತ್ಯನಾಥ್ ಸರಕಾರ ಬಂದ ಮೇಲೆ ಉತ್ತರ ಪ್ರದೇಶದ ಸ್ಥಿತಿ ಅಧೋಗತಿಗೆ ಹೋಗಿದೆ ಎಂದು ರೈ ಹೇಳಿದರು.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತಿತರ ಮುಖಂಡರು ಇದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am