ಬ್ರೇಕಿಂಗ್ ನ್ಯೂಸ್
18-07-22 08:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಮಂಗಳೂರು ಏರ್ಪೋರ್ಟ್ ಮೂಲಕ ಕೇರಳಕ್ಕೆ ತೆರಳಿದ್ದ ಯುವಕನಿಗೆ ಮಂಕಿ ಪಾಕ್ಸ್ ದೃಢಪಟ್ಟಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರಿನಲ್ಲಿ ಎಲರ್ಟ್ ಮಾಡಿದೆ.
ಜುಲೈ 13 ರಂದು ದುಬೈನಿಂದ ಮಂಗಳೂರು ಏರ್ಪೋರ್ಟ್ ಆಗಮಿಸಿದ್ದ 31 ವರ್ಷದ ಕಣ್ಣೂರು ಮೂಲದ ಯುವಕ ಶಂಕೆಯ ಮೇರೆಗೆ ಕಣ್ಣೂರಿನ ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ತಪಾಸಣೆಗೆ ಒಳಗಾಗಿದ್ದ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು, ಮಂಕಿ ಪಾಕ್ಸ್ ಇರುವುದನ್ನು ಪತ್ತೆ ಮಾಡಿದ್ದಾರೆ. ಯುವಕನ ಜೊತೆಗಿದ್ದ ವ್ಯಕ್ತಿಗೆ ದುಬೈನಲ್ಲಿ ರೋಗ ದೃಢಪಟ್ಟಿದ್ದರಿಂದ ಈತನೂ ಚಿಕಿತ್ಸೆಗೆ ದಾಖಲಾಗಿದ್ದ. ಈ ನಡುವೆ, ಯುವಕನ ರಕ್ತದ ಮಾದರಿಯನ್ನು ಪುಣೆ ವೈರಾಲಜಿ ಕೇಂದ್ರಕ್ಕೆ ವೈದ್ಯರು ಕಳುಹಿಸಿದ್ದು ಅಲ್ಲಿ ಪಾಸಿಟಿವ್ ಬಂದಿರುವುದು ಪತ್ತೆಯಾಗಿದೆ. ಇದರೊಂದಿಗೆ, ಕೇರಳದಲ್ಲಿ ಎರಡನೇ ಮಂಕಿ ಪಾಕ್ಸ್ ಪ್ರಕರಣ ಪತ್ತೆ ಆದಂತಾಗಿದೆ. ಮೊದಲ ಪ್ರಕರಣ ತಿರುವನಂತಪುರದಲ್ಲಿ ದಾಖಲಾಗಿತ್ತು.
ಇದೇ ವೇಳೆ, ಯುವಕನ ನೇರ ಸಂಪರ್ಕಕ್ಕೆ ಬಂದ 35 ಮಂದಿಗೆ ಐಸೊಲೇಶನ್ ಇರುವಂತೆ ಸೂಚಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು, ಆತನ ಜೊತೆಗೆ ಬಂದಿದ್ದ ಪ್ರಯಾಣಿಕರಿಗೆ ಪ್ರತ್ಯೇಕ ಇದ್ದು ನಿಗಾ ವಹಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಯುವಕ ದುಬೈನಿಂದ ಬಂದಿದ್ದ ವಿಮಾನದಲ್ಲಿ 191 ಪ್ರಯಾಣಿಕರಿದ್ದರು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 15, ಉಡುಪಿ ಜಿಲ್ಲೆಯ 6, ಕಾಸರಗೋಡು ಜಿಲ್ಲೆಯ 13, ಕಣ್ಣೂರಿನ ಒಬ್ಬ ಸೇರಿದಂತೆ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಅಧಿಕಾರಿಯೊಬ್ಬರನ್ನು ಐಸೊಲೇಶನ್ ಇರುವಂತೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಇದೇ ವೇಳೆ, ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಶಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕ ಐಸೊಲೇಶನ್ ವಾರ್ಡ್ ಆರಂಭಿಸಲಾಗಿದೆ. ಒಂದು ತಿಂಗಳ ಮೊದಲೇ ವಾರ್ಡ್ ಆರಂಭಿಸಲಾಗಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಇದಕ್ಕಾಗಿ ಏರ್ಪೋರ್ಟ್ ನಲ್ಲಿ ಕಟ್ಟುನಿಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.
Kerala on Monday confirmed the second case of monkeypox. The new case, a 31-year-old man, reached Kannur from Dubai on July 13. "The second positive case of Monkey Pox in Kerala has been confirmed in Kannur District," State Health Ministry confirmed. The government, on the other hand, has stepped up vigil to contain the spread of monkeypox, issuing special alerts to five districts, a day after the southern state reported the country's first case of the rare virus infection.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am