ಬ್ರೇಕಿಂಗ್ ನ್ಯೂಸ್
18-07-22 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಬಹುಜನ ಚಳವಳಿ ನಾಯಕ, ಹಿರಿಯ ದಲಿತ ನಾಯಕರಾಗಿದ್ದ ಡೀಕಯ್ಯ ಮೃತಪಟ್ಟ ಹತ್ತು ದಿನಗಳ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ದಫನ ಮಾಡಿದ್ದ ಕಳೇಬರವನ್ನು ಹೊರತೆಗೆದು ಪೋಸ್ಟ್ ಮಾರ್ಟಂ ನಡೆಸಲಾಗಿದೆ.
ಜುಲೈ 8 ರಂದು ಮೃತಪಟ್ಟಿದ್ದ ಡೀಕಯ್ಯ ಅವರನ್ನು ಹುಟ್ಟೂರು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದಲ್ಲಿ ದಫನ ಮಾಡಲಾಗಿತ್ತು. ಮನೆಯಲ್ಲಿ ಒಬ್ಬರೇ ಇದ್ದಾಗ ಜುಲೈ 6 ರಂದು ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಆಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಜು.8ರಂದು ಮೆದುಳಿನ ರಕ್ತಸ್ರಾವದಿಂದ ಡೀಕಯ್ಯ ಮೃತಪಟ್ಟಿದ್ದಾಗಿ ಹೇಳಲಾಗಿತ್ತು.
ಡೀಕಯ್ಯ ಸಾವಿನ ಬಗ್ಗೆ ಅವರ ಅಕ್ಕನ ಗಂಡ ಪದ್ಮನಾಭ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮೃತದೇಹ ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಡೀಕಯ್ಯ ಐಸಿಯುನಲ್ಲೇ ಇದ್ದರು. ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವು ಆಗಿತ್ತು ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಮೃತದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿತ್ತು.
ಆದರೆ ಇದೀಗ ಸಿಕ್ಕ ಆಸ್ಪತ್ರೆಯ ಮೆಡಿಕಲ್ ರಿಪೋರ್ಟ್ ನಲ್ಲಿ ದೇಹದ ಮೇಲೆ ಗಾಯದ ಗುರುತುಗಳಿದ್ದು, ಮೂಳೆ ಮುರಿತದ ಬಗ್ಗೆ ಉಲ್ಲೇಖಿಸಲಾಗಿದೆ. ಹೀಗಾಗಿ ಸಾವಿನ ಬಗ್ಗೆ ಸಂಶಯ ಉಂಟಾಗಿದೆ. ಯಾರೋ ಹೊಡೆದು ಕೊಲೆ ಮಾಡಿದ್ದಾರೋ ಎನ್ನುವ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೆಡಿಕಲ್ ರಿಪೋರ್ಟ್ ನಲ್ಲಿ ಮುರಿತದ ಬಗ್ಗೆ ಉಲ್ಲೇಖವಿದ್ದು ಮೃತದೇಹದ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.
Following suspicion expressed by members of Dalit leader P Deekaiah in Belthangady over the cause of his death, the body which was cremated at Padmunja was exhumed in the presence of the Tahsildar and sent for a post-mortem.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am