ಬ್ರೇಕಿಂಗ್ ನ್ಯೂಸ್
18-07-22 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಬಹುಜನ ಚಳವಳಿ ನಾಯಕ, ಹಿರಿಯ ದಲಿತ ನಾಯಕರಾಗಿದ್ದ ಡೀಕಯ್ಯ ಮೃತಪಟ್ಟ ಹತ್ತು ದಿನಗಳ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ದಫನ ಮಾಡಿದ್ದ ಕಳೇಬರವನ್ನು ಹೊರತೆಗೆದು ಪೋಸ್ಟ್ ಮಾರ್ಟಂ ನಡೆಸಲಾಗಿದೆ.
ಜುಲೈ 8 ರಂದು ಮೃತಪಟ್ಟಿದ್ದ ಡೀಕಯ್ಯ ಅವರನ್ನು ಹುಟ್ಟೂರು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದಲ್ಲಿ ದಫನ ಮಾಡಲಾಗಿತ್ತು. ಮನೆಯಲ್ಲಿ ಒಬ್ಬರೇ ಇದ್ದಾಗ ಜುಲೈ 6 ರಂದು ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಆಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಜು.8ರಂದು ಮೆದುಳಿನ ರಕ್ತಸ್ರಾವದಿಂದ ಡೀಕಯ್ಯ ಮೃತಪಟ್ಟಿದ್ದಾಗಿ ಹೇಳಲಾಗಿತ್ತು.
ಡೀಕಯ್ಯ ಸಾವಿನ ಬಗ್ಗೆ ಅವರ ಅಕ್ಕನ ಗಂಡ ಪದ್ಮನಾಭ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮೃತದೇಹ ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಡೀಕಯ್ಯ ಐಸಿಯುನಲ್ಲೇ ಇದ್ದರು. ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವು ಆಗಿತ್ತು ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಮೃತದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿತ್ತು.
ಆದರೆ ಇದೀಗ ಸಿಕ್ಕ ಆಸ್ಪತ್ರೆಯ ಮೆಡಿಕಲ್ ರಿಪೋರ್ಟ್ ನಲ್ಲಿ ದೇಹದ ಮೇಲೆ ಗಾಯದ ಗುರುತುಗಳಿದ್ದು, ಮೂಳೆ ಮುರಿತದ ಬಗ್ಗೆ ಉಲ್ಲೇಖಿಸಲಾಗಿದೆ. ಹೀಗಾಗಿ ಸಾವಿನ ಬಗ್ಗೆ ಸಂಶಯ ಉಂಟಾಗಿದೆ. ಯಾರೋ ಹೊಡೆದು ಕೊಲೆ ಮಾಡಿದ್ದಾರೋ ಎನ್ನುವ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೆಡಿಕಲ್ ರಿಪೋರ್ಟ್ ನಲ್ಲಿ ಮುರಿತದ ಬಗ್ಗೆ ಉಲ್ಲೇಖವಿದ್ದು ಮೃತದೇಹದ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.
Following suspicion expressed by members of Dalit leader P Deekaiah in Belthangady over the cause of his death, the body which was cremated at Padmunja was exhumed in the presence of the Tahsildar and sent for a post-mortem.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm