ಬ್ರೇಕಿಂಗ್ ನ್ಯೂಸ್
21-07-22 10:40 am Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಹಿಜಬ್ ವಿವಾದ, ಗೊಂದಲದ ಬೆನ್ನಲ್ಲೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿವೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಮ್ ಆಡಳಿತ ಸಂಸ್ಥೆಗಳು ಪಿಯು ಕಾಲೇಜು ಆರಂಭಿಸಲು ಅನುಮತಿ ಕೋರಿ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿವೆ ಎನ್ನುವ ಮಾಹಿತಿಗಳಿವೆ.
ಹಿಜಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ, ಪಿಯು ಮತ್ತು ಕೆಳಗಿನ ಶಾಲೆಗಳಲ್ಲಿ ಹಿಜಾಬ್ ನಿಷೇಧ ಆಗಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದರ ನಡುವೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಕಾರಣಕ್ಕೆ ಶಿಕ್ಷಣವನ್ನೇ ಕಡಿತಗೊಳಿಸಿದ್ದರೆ, ಬಹುತೇಕ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಬರಲು ಒಪ್ಪಿದ್ದಾರೆ. ವಾರದ ಹಿಂದೆ ಮಂಗಳೂರಿನಲ್ಲಿ ಹಿಜಾಬ್ ನಮ್ಮ ಹಕ್ಕು ಎನ್ನುವ ಹೆಸರಲ್ಲಿ ಕ್ಯಾಂಪಸ್ ಫ್ರಂಟ್ ಆಶ್ರಯದಲ್ಲಿ ವಿದ್ಯಾರ್ಥಿನಿಯರ ಸಮಾವೇಶವೂ ನಡೆದಿತ್ತು.

ಗೊಂದಲ, ವಿವಾದದ ನಡುವೆ ಈ ಬಾರಿಯ ಶೈಕ್ಷಣಿಕ ವರ್ಷ ಮುಗಿದಿದ್ದು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಕಲಿಯುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಇಕ್ಕಟ್ಟಿನ ಸ್ಥಿತಿಯನ್ನೂ ಎದುರಿಸಿದ್ದರು. ಈ ನಡುವೆ, ಈಗಾಗಲೇ ಮುಸ್ಲಿಂ ಶಾಲೆಗಳಿರುವಲ್ಲಿ ಪಿಯುಸಿ ಶಿಕ್ಷಣವನ್ನೂ ಆರಂಭಿಸಲು ಸದ್ದಿಲ್ಲದೆ ತಯಾರಿ ನಡೆದಿದ್ದು ಅದಕ್ಕಾಗಿ ಸರಕಾರದಿಂದ ಅನುಮತಿ ಪಡೆಯೋದಕ್ಕೆ ಸಂಸ್ಥೆಗಳು ಮುಂದಾಗಿವೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸತಾಗಿ ಪಿಯು ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪಿಯು ಬೋರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ. 14 ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಪಿಯು ಕಾಲೇಜು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಒಂದು ಮುಸ್ಲಿಂ ಮತ್ತು ಇನ್ನೊಂದು ಸುಬ್ರಹ್ಮಣ್ಯ ಬಳಿಯ ಮುಸ್ಲಿಮೇತರ ಆಡಳಿತದ ಶಿಕ್ಷಣ ಸಂಸ್ಥೆಗೆ ಕಾಲೇಜು ಆರಂಭಿಸಲು ಅನುಮತಿ ಸಿಕ್ಕಿದೆ. ಮುಸ್ಲಿಂ ಸಮುದಾಯದ ಮುಖಂಡರು ತಾವಾಗಿಯೇ ತಮ್ಮ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಅದನ್ನು ಕಾರ್ಯರೂಪಕ್ಕೆ ತರಲು ಹೊಸತಾಗಿ ಮುಸ್ಲಿಂ ಆಡಳಿತದ್ದೇ ಖಾಸಗಿ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
As many as 13 Muslim educational institutions have sought the Karnataka government’s permission to set up Pre-University Colleges in Dakshina Kannada which would enable Muslim girl students to wear hijab inside classrooms.According to sources in the Education Department, all the applications have sought consent to open PU colleges (first and second PUC) in the coastal district of Dakshina Kannada from where the agitation for hijab began in Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm